ಆಕಾಶದಲ್ಲಿ ಜನರೇ ಇಲ್ಲದೆ ಹಾರಿ ಬಂದ ಪ್ಯಾರಾಚ್ಯೂಟ್ ಒಂದು ಗ್ರಾಮದ ಹೊಲವೊಂದರಲ್ಲಿ ಲ್ಯಾಂಡ್ ಆದ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಭೀಮಾತೀರದ ಮರಗೂರು ಗ್ರಾಮದಲ್ಲಿ ನಡೆದಿದೆ.
ಸ್ಥಳಕ್ಕೆ ಓಡಿ ಬಂದು ಪರಿಶೀಲಿಸಿದ ಗ್ರಾಮಸ್ಥರು ಬಿದ್ದಿರುವ ಪ್ಯಾರಾಚ್ಯೂಟ್ನಲ್ಲಿದ್ದ ವಸ್ತುವನ್ನು ನೋಡಿ ಭಯಗೊಂಡಿದ್ದಾರೆ. ಬಾಕ್ಸ್ ಒಂದರಲ್ಲಿ ಜೋಡಿಸಲಾದ ಎಲೆಕ್ಟ್ರಾನಿಕ್ ಉಪಕರಣ ನೆಲಕ್ಕೆ ಬಿದ್ದು ಪುಡಿಯಾಗಿದ್ದರೂ ಅದರಲ್ಲಿ ಸಿಗ್ನಲ್ ಆಗುತ್ತಿತ್ತು. ಹೀಗಾಗಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ಕೂಲಂಕುಶವಾಗಿ ನಡೆಸಿದ ಪರಿಶೀಲನೆ ಬಳಿಕ ಇದು ಹೈದರಾಬಾದ್ ಮೂಲದ ಟಾಟ ಇನ್ಸ್ಟಿಟ್ಯೂಟ್ ಆಫ್ ಫಂಡಮೆAಟಲ್ ರಿಸರ್ಚ್ ಸೆಂಟರ್ ಹಾರಿಸಿದ್ದ ಉಪಕರಣ ಅನ್ನೋದು ಗೊತ್ತಾಗಿದೆ. ಹವಾಮಾನ ಹಾಗೂ ವಾತಾವರಣದ ಅಧ್ಯಯನಕ್ಕಾಗಿ ಇದನ್ನು ಉಡಾವಣೆ ಮಾಡಲಾಗಿದ್ದು, ನಿಯಂತ್ರಣ ಕಳೆದುಕೊಂಡು ಭೀಮಾತೀರದ ಮರಗೂರಿನ ಹೊಲಕ್ಕೆ ಬಿದ್ದಿತ್ತು. ಈ ಬಗ್ಗೆ ವಿಯಯಪುರ ಜಿಲ್ಲಾಡಳಿತ ಸಂಶೋಧನಾ ಸಂಸ್ಥೆಗೆ ಮಾಹಿತಿ ನೀಡಿದ್ದು, ಅಲ್ಲಿನ ವಿಜ್ಞಾನಿಗಳು ಈ ಉಪಕರಣ ತೆಗೆದುಕೊಂಡು ಹೋಗಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…