ತುಳುನಾಡ್ ಬಂಟ ಮಹಿಳಾ ಸಂಘದ ವತಿಯಿಂದ ಆಟಿದ ಕೂಟ ಕಾರ್ಯಕ್ರಮ ಮುಲ್ಕಿ ಸಮೀಪದ ಕೆಂಚನಕೆರೆ ಅಂಬಾ ನಿವಾಸದಲ್ಲಿ ನಡೆಯಿತು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಸಂಘದ ಅಧ್ಯಕ್ಷೆ ಶಮೀನಾ ಆಳ್ವ ವಹಿಸಿದ್ದರು .ಮುಖ್ಯ ಅತಿಥಿಗಳಾಗಿ ಪರಿಸರ ಪ್ರೇಮಿ ಸುಮತಿ ಶೆಟ್ಟಿ ಕೆಮ್ರಾಲ್ ರವರು ಹಿಂದಿನ ಕಾಲದ ಆಷಾಢ ಮಾಸದ ಬಗ್ಗೆ ಮಾಹಿತಿ ನೀಡಿ ಮೊಬೈಲ್ ತಂತ್ರಜ್ಞಾನದ ಯುಗದಲ್ಲಿ ಹಿಂದಿನ ಕಾಲದ ಆಷಾಢ ಮಾಸದ ಕಷ್ಟದ ದಿನಗಳು ಅಮೂಲ್ಯವಾಗಿದ್ದು ಅದನ್ನು ನೆನಪಿಸಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದರು.ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ,ತುಳುನಾಡ್ ಬಂಟ ಮಹಿಳಾ ಸಂಘದ ಉಪಾಧ್ಯಕ್ಷೆ ರೋಹಿಣಿ ಶೆಟ್ಟಿ, ಕಾರ್ಯದರ್ಶಿ ಕುಸುಮಾ ಆರ್ ಶೆಟ್ಟಿ, ಅಮೂಲ್ಯ ಉಮೇಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಾದ ವಿಘ್ನೇಶ್ ಹಾಗೂ ಶ್ರಾವ್ಯ ರವರನ್ನು ಗೌರವಿಸಲಾಯಿತು. ಅಮೂಲ್ಯ ಉಮೇಶ್ ನಿರೂಪಿಸಿದರು. ಬಳಿಕ ಸಂಘದ ಸದಸ್ಯರು ಆಷಾಡ ಮಾಸದ ವಿವಿಧ ತಿಂಡಿಗಳ ಸವಿಯುಟ ಮಾಡಿ ಸಂಭ್ರಮಿಸಿದರು.
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…
ಪ್ರಚೋದನಾಕಾರಿ ಭಾಷಣ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎಸ್ಟಿಪಿಐ ಮುಖಂಡ ಮಹಮ್ಮದ್ ರಿಯಾಜ್ ಫರಂಗಿಪೇಟೆ…
ಬೀದಿ ನಾಯಿಗಳ ದಾಳಿಯಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ಪಟ್ಟಣದ ವಾರ್ಡ್…
ಮಳೆ ಬಂದಾಗಲೆಲ್ಲ ಕೃತಕ ನೆರೆ ಉಂಟಾಗಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತಿದ್ದ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ…
ಜಿಲ್ಲೆಯ ಯಲಬುರ್ಗಾ, ಕುಷ್ಟಗಿ ಹಾಗೂ ಕೊಪ್ಪಳ ತಾಲೂಕಿನ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರು ಗಂಭೀರ…