ಜೀವನದಲ್ಲಿ ಸವಾಲುಗಳನ್ನು ಸಂತೋಷದಿಂದ ಎದುರಿಸಿಕೊಂಡು ಮುಂದಿನ ಯುವ ಪೀಳಿಗೆಗೆ ತಮ್ಮ ಲೇಖನದ ಮೂಲಕ ತುಳುನಾಡಿನ ಸಂಸ್ಕಾರ ಸಂಸ್ಕೃತಿ ಪರಿಚಯಿಸಿ ಸಾಧನೆ ಮಾಡಿ ಸಾಧಕರಾದ ಡಾ. ಹರೀಶ್ಚಂದ್ರ ಸಾಲ್ಯಾನ್ ರವರು ಓರ್ವ ಅಧ್ಯಯನಶೀಲತೆಯ ಸಾಹಿತ್ಯಿಕ ಉಪಾಸಕ ಎಂದು ಬೆಂಗಳೂರಿನ ಆಧ್ಯಾತ್ಮಿಕ ಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು .
ಅವರು ಸಾಹಿತಿ, ಸಮಾಜ ಸೇವಕ,ಧಾರ್ಮಿಕ ಕ್ಷೇತ್ರದಲ್ಲಿನ ಗಣನೀಯ ಸೇವೆಯನ್ನು ಪರಿಗಣಿಸಿ ಆರ್ಯಭಟ ಪ್ರಶಸ್ತಿ ಹಾಗೂ ಅಂತರರಾಷ್ಟ್ರೀಯ ಮಾನವ ಅಭಿವೃದ್ಧಿ ಮಂಡಳಿಯವರಿಂದ ಪ್ರಶಸ್ತಿ ಪಡೆದ ಡಾ.ಹರಿಶ್ಚಂದ್ರ ಪಿ. ಸಾಲ್ಯಾನ್ ರವರನ್ನು ಸಾಧಕರ ನೆಲೆಯಲ್ಲಿ ಕಿಲ್ಪಾಡಿಯ ತಮ್ಮ ಆಶ್ರಮದಲ್ಲಿ ಗೌರವಿಸಿ ಮಾತನಾಡಿ ಡಾ. ಸಾಲ್ಯಾನ್ ರವರ ಸಾಧನೆ ನಿರಂತರವಾಗಿ ನಡೆದು ಸಮಾಜದಲ್ಲಿ ಉತ್ತಮ ಸ್ಥಾನ ಪಡೆದು ಉನ್ನತ ಸಾಧಕರಾಗಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕಿ ರಜನಿ ಸಿ ಭಟ್, ರಾಹುಲ್ ಚಂದ್ರಶೇಖರ್, ಸಂಚಾಲಕರಾದ ಗುರುಪ್ರಸಾದ್ ಭಟ್ ಮುಂಡ್ಕೂರು, ಪುನೀತ್ ಕೃಷ್ಣ ಮತ್ತಿತರರು ಉಪಸ್ಥಿತರಿದ್ದರು
ಪುನೀತ್ ಕೃಷ್ಣ ಸ್ವಾಗತಿಸಿ ನಿರೂಪಿಸಿದರು ಗುರುಪ್ರಸಾದ್ ಭಟ್ ಧನ್ಯವಾದ ಅರ್ಪಿಸಿದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…