ಹಠಾತ್ ಅನಾರೋಗ್ಯಕ್ಕೀಡಾದ ಕಾಲೇಜು ವಿದ್ಯಾರ್ಥಿಯೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.
ಕಡಬ ತಾಲೂಕು ಕೊಯಿಲ ಗ್ರಾಮದ ಗಂಡಿಬಾಗಿಲು ನಿವಾಸಿ ಮುಹಮ್ಮದ್ ಸಿರಾಜುದ್ದೀನ್ (17) ಮೃತ ವಿದ್ಯಾರ್ಥಿ.ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಓದುತ್ತಿದ್ದ ಈತ ಕಾಲೇಜಿಗೆಂದು ಬೆಳಿಗ್ಗೆ ತನ್ನ ಗೆಳೆಯರೊಂದಿಗೆ ಹೊರಟು ಬಂದಿದ್ದ ಎಂದು ತಿಳಿದು ಬಂದಿದೆ .ಕಾಲೇಜಿನ ದಾರಿ ಮಧ್ಯೆ ಬಿ.ಪಿ. ಲೋ ಸಮಸ್ಯೆಯಿಂದ ಈತ ತಲೆ ತಿರುಗಿ ಬಿದ್ದಿದ್ದಾರೆ ಎನ್ನಲಾಗಿದ್ದು ಜೊತೆಗಿದ್ದ ಸ್ನೇಹಿತರು ಈತನನ್ನು ಆಸ್ಪತ್ರೆಗೆ ದಾಖಲಿಸಿದ್ದರು. ದ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತದೇಹವನ್ನು ಕಾಲೇಜಿಗೆ ತಂದು ಅಂತಿಮ ದರ್ಶನಕ್ಕಿಡಲಾಗಿತ್ತು ಎಂದು ತಿಳಿದು ಬಂದಿದೆ
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…