ಜನ ಮನದ ನಾಡಿ ಮಿಡಿತ

Advertisement

ಹಿರಿಯ ಕೃಷಿಕ ,ಸುರಗಿರಿ ಭಾವದೊಟ್ಟು ಮನೆ ಬಾಲಾದಿತ್ಯ ಆಳ್ವ ನಿಧನ

ಪಕ್ಷಿಕೆರೆ ಸುರಗಿರಿ ಭಾವದೊಟ್ಟು ಮನೆ ನಿವಾಸಿ ಬಾಲಾದಿತ್ಯ ಆಳ್ವ (75) ಹೃದಯಾಘಾತದಿಂದ ಭಾನುವಾರ ನಿಧನರಾದರು


ಅವರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಕೆಮ್ರಾಲ್ ಮಾಜೀ ಮಂಡಲ ಪ್ರಧಾನರಾಗಿ, ಹಿರಿಯ ಕೃಷಿಕರಾಗಿ, ಕಾಂಗ್ರೆಸ್ ಮುಖಂಡರಾಗಿ ಪಕ್ಷಕ್ಕಾಗಿ ಬಹಳಷ್ಟು ಶ್ರಮಿಸಿದ್ದರು.
ಪಕ್ಷಿಕೆರೆ ಕೋರ್ದಬ್ಬು ದೈವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ, ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಅರಸು ಕುಂಜೂರಾಯ ದೈವಸ್ಥಾನ ಸಹಿತ ಅನೇಕ ಧಾರ್ಮಿಕ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಕೊಡುಗೈ ದಾನಿಯಾಗಿ ಜನಾನುರಾಗಿಯಾಗಿದ್ದರು.
ಅವರ ನಿಧನಕ್ಕೆ ಬೆಂಗಳೂರಿನ ಆಧ್ಯಾತ್ಮಿಕ ಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಮುಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು, ಕರ್ನಾಟಕ ಸರಕಾರದ ವಿಧಾನಸಭೆಯ ಸಭಾಧ್ಯಕ್ಷ ಶಾಸಕ ಯುಟಿ ಖಾದರ್, ಶಾಸಕ ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ,
ಮಾಜೀ ಸಚಿವ ಅಭಯಚಂದ್ರ ಜೈನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ್ ಬೆರ್ನಾಡ್, ಗುರುರಾಜ್ ಎಸ್ ಪೂಜಾರಿ ತೋಕೂರು, ಕೆಮ್ರಾಲ್ ಗ್ರಾಮ ಪಂಚಾಯತ್ ಅಧ್ಯಕ್ಷ ಮಯ್ಯದ್ದಿ ಪಕ್ಷಿಕೆರೆ, ಅಭಿವೃದ್ಧಿ ಅಧಿಕಾರಿ ಅರುಣ್ ಪ್ರದೀಪ್ ಡಿಸೋಜಾ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಮಟ್ಟು
ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ,ಕಾಂಗ್ರೆಸ್ ನಾಯಕರಾದ ಗೋಪಿನಾಥ ಪಡಂಗ,ಸಾಹುಲ್ ಹಮೀದ್ ಕದಿಕೆ ,ಪುತ್ತು ಭಾವ, ದಯಾನಂದ ಮಟ್ಟು, ಮಂಜುನಾಥ್ ಕಂಬಾರ್, ಪ್ರವೀಣ್ ಪಕ್ಷಿಕೆರೆ, ಜಾಕ್ಸನ್ ಸಲ್ದಾನ,ನವೀನ್ ಸಾಲ್ಯಾನ್ ಪಂಜ, ಸುರೇಶ್ ಪಂಜ,ಸುರೇಶ್ ಕೆ ಸುವರ್ಣ ಐಕಳ,ಭೀಮಾ ಶಂಕರ್ ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ
ಮೃತರ ಅಂತ್ಯಕ್ರಿಯೆ ನಾಳೆ ಅವರ ಸ್ವಗೃಹ ದಲ್ಲಿ ಸೋಮವಾರ ಆ.5ರ ಬೆಳಗ್ಗೆ9.30ಕ್ಕೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!