ಜನ ಮನದ ನಾಡಿ ಮಿಡಿತ

Advertisement

ಸಣ್ಣ ಸಣ್ಣ ಗೂಡಂಗಡಿಗಳಿಗೆ ನುಗ್ಗಿದ ಕಳ್ಳರು…!

ಸಣ್ಣ ಸಣ್ಣ ಗೂಡಂಗಡಿಗಳಿಗೆ ನುಗ್ಗಿದ ಕಳ್ಳರು ಸಾಮಾಗ್ರಿಗಳನ್ನು ಕಳವು ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಬುಡೋಳಿ ಮತ್ತು ಗಡಿಯಾರ ಎಂಬಲ್ಲಿ ನಡೆದಿದೆ.

ಬುಡೋಳಿ ಕೇಶವ ಎಂಬವರ ಅಂಗಡಿಗೆ ನುಗ್ಗಿದ ಕಳ್ಳರು ಚಿಲ್ಲರೆ ಸಾಮಾಗ್ರಿಗಳಾದ ಸಿಗರೇಟ್ ಕಳವು ಮಾಡಿದ್ದು ಇವರು ಪೋಲೀಸ್ ದೂರು ನೀಡಿಲ್ಲ ಎಂದು ಹೇಳಲಾಗಿದೆ. ಗಡಿಯಾರ ಹರೀಶ್ ಪೂಜಾರಿ ಮತ್ತು ಲೋಕೇಶ್ ಕುಲಾಲ್ ಎಂಬವರ ಗೂಡಂಗಡಿಗೆ ನುಗ್ಗಿ ಒಂದು ಅಂಗಡಿಯಿಂದ ಅಡುಗೆ ಗ್ಯಾಸ್ ನ ಸಿಲಿಂಡರ್ ಕಳವು ಮಾಡಲಾಗಿದೆ ಎನ್ನಲಾಗಿದೆ.

ಅದರಲ್ಲಿ ಒಂದು‌ಗೂಡಂಗಡಿ ಕಳೆದ ಒಂದು ತಿಂಗಳಿನಿಂದ ಬಂದ್ ಆಗಿತ್ತು.ಅದರೊಳಗಿದ್ದ ಸಾಮಾಗ್ರಿಗಳನ್ನು ಕಳವು‌ಮಾಡಲಾಗಿದೆ ಎಂದು ಹೇಳಲಾಗಿದ್ದು,ಇಲ್ಲಿನ ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿದೆ ಎನ್ನಲಾಗದ ಕಳ್ಳರ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಹೇಳಲಾಗಿದೆ.
ಮಳೆಗಾಲದಲ್ಲಿ ಈ ಬಾಗದಲ್ಲಿ ಬೀಟ್ ಪೋಲೀಸರ ಸಂಚಾರ ಕಡಿಮೆಯಾಗಿದ್ದು, ಕಳ್ಳರ ದಾರಿ ಸುಗಮವಾಗಿ ಸಾಗಲು ಸಾಧ್ಯವಾಗಿದೆ ಎಂಬ ಆರೋಪ ಸ್ಥಳೀಯರದ್ದು.ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಅಂಗಡಿಗಳು ಇದಾಗಿದ್ದು, ವ್ಯಾಪ್ತಿಯ ಕಡೆ ಭಾಗವಾಗಿದೆ. ಪೋಲೀಸರಿಗೆ ಕಳ್ಳರ ಕಾಟವನ್ನು ಎದುರಿಸುವುದು ಸವಾಲಾಗಿದ್ದು, ಮಳೆಗಾಲದಲ್ಲಿ ಪ್ರತಿ ವರ್ಷ ಕಳ್ಳರ ಕೂಟ ಬಲಗೊಳ್ಳುತ್ತಿದ್ದು, ಸಾರ್ವಜನಿಲ ವಲಯಕ್ಕೆ ಒಂದು ರೀತಿಯ ಆತಂಕದ ಜೀವನವಾಗಿದೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!