ಸಣ್ಣ ಸಣ್ಣ ಗೂಡಂಗಡಿಗಳಿಗೆ ನುಗ್ಗಿದ ಕಳ್ಳರು ಸಾಮಾಗ್ರಿಗಳನ್ನು ಕಳವು ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಬುಡೋಳಿ ಮತ್ತು ಗಡಿಯಾರ ಎಂಬಲ್ಲಿ ನಡೆದಿದೆ.
ಬುಡೋಳಿ ಕೇಶವ ಎಂಬವರ ಅಂಗಡಿಗೆ ನುಗ್ಗಿದ ಕಳ್ಳರು ಚಿಲ್ಲರೆ ಸಾಮಾಗ್ರಿಗಳಾದ ಸಿಗರೇಟ್ ಕಳವು ಮಾಡಿದ್ದು ಇವರು ಪೋಲೀಸ್ ದೂರು ನೀಡಿಲ್ಲ ಎಂದು ಹೇಳಲಾಗಿದೆ. ಗಡಿಯಾರ ಹರೀಶ್ ಪೂಜಾರಿ ಮತ್ತು ಲೋಕೇಶ್ ಕುಲಾಲ್ ಎಂಬವರ ಗೂಡಂಗಡಿಗೆ ನುಗ್ಗಿ ಒಂದು ಅಂಗಡಿಯಿಂದ ಅಡುಗೆ ಗ್ಯಾಸ್ ನ ಸಿಲಿಂಡರ್ ಕಳವು ಮಾಡಲಾಗಿದೆ ಎನ್ನಲಾಗಿದೆ.
ಅದರಲ್ಲಿ ಒಂದುಗೂಡಂಗಡಿ ಕಳೆದ ಒಂದು ತಿಂಗಳಿನಿಂದ ಬಂದ್ ಆಗಿತ್ತು.ಅದರೊಳಗಿದ್ದ ಸಾಮಾಗ್ರಿಗಳನ್ನು ಕಳವುಮಾಡಲಾಗಿದೆ ಎಂದು ಹೇಳಲಾಗಿದ್ದು,ಇಲ್ಲಿನ ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿದೆ ಎನ್ನಲಾಗದ ಕಳ್ಳರ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಹೇಳಲಾಗಿದೆ.
ಮಳೆಗಾಲದಲ್ಲಿ ಈ ಬಾಗದಲ್ಲಿ ಬೀಟ್ ಪೋಲೀಸರ ಸಂಚಾರ ಕಡಿಮೆಯಾಗಿದ್ದು, ಕಳ್ಳರ ದಾರಿ ಸುಗಮವಾಗಿ ಸಾಗಲು ಸಾಧ್ಯವಾಗಿದೆ ಎಂಬ ಆರೋಪ ಸ್ಥಳೀಯರದ್ದು.ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಅಂಗಡಿಗಳು ಇದಾಗಿದ್ದು, ವ್ಯಾಪ್ತಿಯ ಕಡೆ ಭಾಗವಾಗಿದೆ. ಪೋಲೀಸರಿಗೆ ಕಳ್ಳರ ಕಾಟವನ್ನು ಎದುರಿಸುವುದು ಸವಾಲಾಗಿದ್ದು, ಮಳೆಗಾಲದಲ್ಲಿ ಪ್ರತಿ ವರ್ಷ ಕಳ್ಳರ ಕೂಟ ಬಲಗೊಳ್ಳುತ್ತಿದ್ದು, ಸಾರ್ವಜನಿಲ ವಲಯಕ್ಕೆ ಒಂದು ರೀತಿಯ ಆತಂಕದ ಜೀವನವಾಗಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…