ಜನ ಮನದ ನಾಡಿ ಮಿಡಿತ

Advertisement

ಬಸ್ ನಲ್ಲಿ ಅಸ್ವಸ್ಥಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ಬಸ್ ನಲ್ಲೇ ಕರೆದುಕೊಂಡ ಬಂದ ಸಿಬ್ಬಂದಿ

ಬಸ್ ನಲ್ಲಿ ಸಂಚರಿಸುತ್ತಿರುವ ವೇಳೆ ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಯುವತಿಯೊಬ್ಬಳನ್ನು ಚಾಲಕ ಬಸ್ ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋದ ಘಟನೆ ಉಡುಪಿಯಲ್ಲಿ ನಡೆದಿದೆ.

ಕರಾವಳಿಯಲ್ಲಿ ಖಾಸಗಿ ಬಸ್ ಸಿಬ್ಬಂದಿಯ ಸಮಯಪ್ರಜ್ಞೆಗೆ ಜನರು ಮೆಚ್ಚುಗೆ ಸೂಚಿಸಿದ್ದಾರೆ.ಉಡುಪಿಯಲ್ಲಿ ಈ ಘಟನೆ ನಡೆದಿದ್ದು, ಶಿರ್ವ ದಿಂದ ಉಡುಪಿಗೆ ಬರುತ್ತಿದ್ದ ನವೀನ್ ಎಂಬ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳು ಬಸ್ ಉಡುಪಿಯ ಹಳೆ ತಾಲ್ಲೂಕು ಕಚೇರಿ ಬರುವಾಗ ಅಸ್ವಸ್ಥಗೊಂಡಿದ್ದಾಳೆ. ಬಸ್ ನಲ್ಲೇ ವಾಂತಿ ಮಾಡಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ ಯುವತಿಯನ್ನು ಬಸ್ ಚಾಲಕ ಕೂಡಲೇ ಹತ್ತಿರದ ಡಾಕ್ಟರ್ ಟಿಎಂಎ ಪೈ ಆಸ್ಪತ್ರೆಗೆ ‌ಬಸ್ ನಲ್ಲೇ ಕರೆದುಕೊಂಡು ಹೋಗಿದ್ದಾರೆ. ಕೂಡಲೇ ಯುವತಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಯುವತಿಯ ಮನೆಯವರಿಗೆ ಮಾಹಿತಿ ನೀಡಿ ಮನೆಯವರು ಬರುವ ತನಕ ಯುವತಿಗೆ ಚಿಕಿತ್ಸೆಗೆ ಬಸ್ ಸಿಬ್ಬಂದಿ ಸಹಕಾರ ನೀಡಿದ್ದಾರೆ. ನವೀನ್ ಬಸ್ ನ ಚಾಲಕ ಶಶಿಕಾಂತ್, ನಿರ್ವಾಹಕ ಸಲೀಂ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗಿದೆ.

ಮಂಗಳೂರಿನಲ್ಲಿ ಇದೇ ರೀತಿ ಪ್ರಕರಣದಲ್ಲಿ ಎದೆ ನೋವಿನಿಂದ ಬಳಲುತ್ತಿದ್ದ ವಿಧ್ಯಾರ್ಥಿನಿಯನ್ನು ಆಸ್ಪತ್ರೆಗೆ ಸೇರಿಸಿ ಆಕೆಯ ಜೀವ ಉಳಿಸಲು ಬಸ್ ಸಿಬ್ಬಂದಿ ನೆರವಾಗಿದ್ದರು.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!