ಜನ ಮನದ ನಾಡಿ ಮಿಡಿತ

Advertisement

ಬಸ್ ನಲ್ಲಿ ಅಸ್ವಸ್ಥಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ಬಸ್ ನಲ್ಲೇ ಕರೆದುಕೊಂಡ ಬಂದ ಸಿಬ್ಬಂದಿ

ಬಸ್ ನಲ್ಲಿ ಸಂಚರಿಸುತ್ತಿರುವ ವೇಳೆ ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಯುವತಿಯೊಬ್ಬಳನ್ನು ಚಾಲಕ ಬಸ್ ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋದ ಘಟನೆ ಉಡುಪಿಯಲ್ಲಿ ನಡೆದಿದೆ.

ಕರಾವಳಿಯಲ್ಲಿ ಖಾಸಗಿ ಬಸ್ ಸಿಬ್ಬಂದಿಯ ಸಮಯಪ್ರಜ್ಞೆಗೆ ಜನರು ಮೆಚ್ಚುಗೆ ಸೂಚಿಸಿದ್ದಾರೆ.ಉಡುಪಿಯಲ್ಲಿ ಈ ಘಟನೆ ನಡೆದಿದ್ದು, ಶಿರ್ವ ದಿಂದ ಉಡುಪಿಗೆ ಬರುತ್ತಿದ್ದ ನವೀನ್ ಎಂಬ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳು ಬಸ್ ಉಡುಪಿಯ ಹಳೆ ತಾಲ್ಲೂಕು ಕಚೇರಿ ಬರುವಾಗ ಅಸ್ವಸ್ಥಗೊಂಡಿದ್ದಾಳೆ. ಬಸ್ ನಲ್ಲೇ ವಾಂತಿ ಮಾಡಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ ಯುವತಿಯನ್ನು ಬಸ್ ಚಾಲಕ ಕೂಡಲೇ ಹತ್ತಿರದ ಡಾಕ್ಟರ್ ಟಿಎಂಎ ಪೈ ಆಸ್ಪತ್ರೆಗೆ ‌ಬಸ್ ನಲ್ಲೇ ಕರೆದುಕೊಂಡು ಹೋಗಿದ್ದಾರೆ. ಕೂಡಲೇ ಯುವತಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಯುವತಿಯ ಮನೆಯವರಿಗೆ ಮಾಹಿತಿ ನೀಡಿ ಮನೆಯವರು ಬರುವ ತನಕ ಯುವತಿಗೆ ಚಿಕಿತ್ಸೆಗೆ ಬಸ್ ಸಿಬ್ಬಂದಿ ಸಹಕಾರ ನೀಡಿದ್ದಾರೆ. ನವೀನ್ ಬಸ್ ನ ಚಾಲಕ ಶಶಿಕಾಂತ್, ನಿರ್ವಾಹಕ ಸಲೀಂ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗಿದೆ.

ಮಂಗಳೂರಿನಲ್ಲಿ ಇದೇ ರೀತಿ ಪ್ರಕರಣದಲ್ಲಿ ಎದೆ ನೋವಿನಿಂದ ಬಳಲುತ್ತಿದ್ದ ವಿಧ್ಯಾರ್ಥಿನಿಯನ್ನು ಆಸ್ಪತ್ರೆಗೆ ಸೇರಿಸಿ ಆಕೆಯ ಜೀವ ಉಳಿಸಲು ಬಸ್ ಸಿಬ್ಬಂದಿ ನೆರವಾಗಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!