ಬಸ್ ನಲ್ಲಿ ಸಂಚರಿಸುತ್ತಿರುವ ವೇಳೆ ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಯುವತಿಯೊಬ್ಬಳನ್ನು ಚಾಲಕ ಬಸ್ ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋದ ಘಟನೆ ಉಡುಪಿಯಲ್ಲಿ ನಡೆದಿದೆ.
ಕರಾವಳಿಯಲ್ಲಿ ಖಾಸಗಿ ಬಸ್ ಸಿಬ್ಬಂದಿಯ ಸಮಯಪ್ರಜ್ಞೆಗೆ ಜನರು ಮೆಚ್ಚುಗೆ ಸೂಚಿಸಿದ್ದಾರೆ.ಉಡುಪಿಯಲ್ಲಿ ಈ ಘಟನೆ ನಡೆದಿದ್ದು, ಶಿರ್ವ ದಿಂದ ಉಡುಪಿಗೆ ಬರುತ್ತಿದ್ದ ನವೀನ್ ಎಂಬ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳು ಬಸ್ ಉಡುಪಿಯ ಹಳೆ ತಾಲ್ಲೂಕು ಕಚೇರಿ ಬರುವಾಗ ಅಸ್ವಸ್ಥಗೊಂಡಿದ್ದಾಳೆ. ಬಸ್ ನಲ್ಲೇ ವಾಂತಿ ಮಾಡಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ ಯುವತಿಯನ್ನು ಬಸ್ ಚಾಲಕ ಕೂಡಲೇ ಹತ್ತಿರದ ಡಾಕ್ಟರ್ ಟಿಎಂಎ ಪೈ ಆಸ್ಪತ್ರೆಗೆ ಬಸ್ ನಲ್ಲೇ ಕರೆದುಕೊಂಡು ಹೋಗಿದ್ದಾರೆ. ಕೂಡಲೇ ಯುವತಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಯುವತಿಯ ಮನೆಯವರಿಗೆ ಮಾಹಿತಿ ನೀಡಿ ಮನೆಯವರು ಬರುವ ತನಕ ಯುವತಿಗೆ ಚಿಕಿತ್ಸೆಗೆ ಬಸ್ ಸಿಬ್ಬಂದಿ ಸಹಕಾರ ನೀಡಿದ್ದಾರೆ. ನವೀನ್ ಬಸ್ ನ ಚಾಲಕ ಶಶಿಕಾಂತ್, ನಿರ್ವಾಹಕ ಸಲೀಂ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗಿದೆ.
ಮಂಗಳೂರಿನಲ್ಲಿ ಇದೇ ರೀತಿ ಪ್ರಕರಣದಲ್ಲಿ ಎದೆ ನೋವಿನಿಂದ ಬಳಲುತ್ತಿದ್ದ ವಿಧ್ಯಾರ್ಥಿನಿಯನ್ನು ಆಸ್ಪತ್ರೆಗೆ ಸೇರಿಸಿ ಆಕೆಯ ಜೀವ ಉಳಿಸಲು ಬಸ್ ಸಿಬ್ಬಂದಿ ನೆರವಾಗಿದ್ದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…