ಉಡುಪಿ: ನಿಂತಿದ್ದ ಬಸ್ ಗೆ ದಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಕಿನ್ನಿಮುಲ್ಕಿಯ ಮಂಜುನಾಥ್ ಪೆಟ್ರೋಲ್ ಬಂಕ್ ಬಳಿ ಇಂದು ರಾತ್ರಿ ನಡೆದಿದೆ.
‘
ಗಾಯಗೊಂಡ ಯುವಕರ ವಿಳಾಸ ತಿಳಿದುಬಂದಿಲ್ಲ. ಅತೀ ವೇಗದಲ್ಲಿ ಸುಜುಕಿ ಆಕ್ಸಿಸ್ ನಲ್ಲಿ ಬಂದ ಯುವಕರಿಬ್ಬರು ರಸ್ತೆ ಬದಿ ನಿಂತಿದ್ದ ಬಸ್ ಗೆ ಡಿಕ್ಕಿ ಹೊಡೆದಿದ್ದಾರೆ. ಇದರ ಪರಿಣಾಮ ಸ್ಕೂಟರ್ ಸಮೇತ ರಸ್ತೆ ಬಿದ್ದ ಇಬ್ಬರಿಗೂ ಗಂಭೀರ ಗಾಯವಾಗಿದೆ. ಆ ಪೈಕಿ ಓರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಸ್ಥಳೀಯರು ಗಾಯಗೊಂಡ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟರ್ ನಜ್ಜುಗುಜ್ಜಾಗಿದೆ. ಉಡುಪಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…