ಜನ ಮನದ ನಾಡಿ ಮಿಡಿತ

Advertisement

ಗೋಕಾಕ: ಪ್ರವಾಹ‌ಪೀಡಿತ ಸ್ಥಳಗಳಿಗೆ ಸಿಎಂ ಭೇಟಿ

 

ಕಾಳಜಿ ಕೇಂದ್ರದಲ್ಲಿ ಸಂತ್ರಸ್ತರ ಅಹವಾಲು ಆಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ  : ಅತಿವೃಷ್ಟಿ ಹಾಗೂ ಪ್ರವಾಹದಿಂದ ಬಾಧಿತಗೊಂಡಿರುವ ಗೋಕಾಕ ನಗರದ ವಿವಿಧ ಪ್ರದೇಶಗಳು ಮತ್ತು ಕಾಳಜಿ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.

ವಿಶೇಷ ವಿಮಾನದ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ‌ ನಿಲ್ದಾಣಕ್ಕೆ ಆಗಮಿಸಿದ ಅವರು, ರಸ್ತೆ ಮಾರ್ಗವಾಗಿ ಗೋಕಾಕ ನಗರಕ್ಕೆ ಆಗಮಿಸಿದರು.

ಅತಿವೃಷ್ಟಿಯಿಂದ ತುಂಬಿ ಹರಿಯುತ್ತಿದ್ದ ಘಟಪ್ರಭಾ ನದಿಯಿಂದ ಮುಳುಗಡೆಯಾಗಿದ್ದ ಲೋಳಸೂರ ಸೇತುವೆಯನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರು, ಹೊಸ ಸೇತುವೆ ನಿರ್ಮಾಣಕ್ಕೆ ಮನವಿ ಮಾಡಿದರು.
ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ, ವಿಧಾನಪರಿಷತ್ ಸದಸ್ಯರಾದ ಲಖನ್ ಜಾರಕಿಹೊಳಿ ಮತ್ತಿತರರು ಉಪಸ್ಥಿತರಿದ್ದರು.

ಇದಾದ‌ ಬಳಿಕ ಲೋಳಸೂರ ಸೇತುವೆಯ ಬಳಿ ಹಿನ್ನೀರಿನಿಂದ ಒಂದು ವಾರದಿಂದ ಮುಳುಗಡೆಯಾಗಿದ್ದ ಗೋಕಾಕ‌ನಗರದ ಹಳೆ ದನಗಳ ಪೇಟೆ, ಮಟನ್ ಮಾರ್ಕೆಟ್, ಕುಂಬಾರಗಲ್ಲಿ, ಉಪ್ಪಾರಗಲ್ಲಿ, ಭೋಜಗಾರ ಗಲ್ಲಿ ಮತ್ತಿತರ‌ ಪ್ರದೇಶಗಳಿಗೆ ಭೇಟಿ ನೀಡಿ ಹಾನಿಯನ್ನು ಪರಿಶೀಲಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು, ಮಳೆಯಿಂದ‌ ಉಂಟಾಗಿರುವ ಹಾನಿಯನ್ನು ವಿವರಿಸಿದರು.
ಸಂಕೇಶ್ವರ-ಯರಗಟ್ಟಿ ರಾಜ್ಯ ಹೆದ್ದಾರಿಯಲ್ಲಿರುವ ಲೋಳಸೂರ ಸೇತುವೆ ತುಂಬಾ ಹಳೆಯದಾಗಿದ್ದು, ಪ್ರತಿವರ್ಷ ಮಳೆಗಾಲದಲ್ಲಿ ಮುಳುಗಡೆಯಾಗುತ್ತಿರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಆದ್ದರಿಂದ ಎತ್ತರದ ಲೋಳಸೂರ ಸೇತುವೆಯ ನಿರ್ಮಿಸುವ ಅಗತ್ಯವಿದೆ ಎಂದು‌ ಸಚಿವ ಸತೀಶ್ ಜಾರಕಿಹೊಳಿ‌ ಅವರು ಮುಖ್ಯಮಂತ್ರಿಗಳಿಗೆ ವಿವರಿಸಿದರು.

ಕಾಳಜಿ ಕೇಂದ್ರಕ್ಕೆ‌ ಭೇಟಿ

ಮುಳಗಡೆಯಿಂದ ಸಂತ್ರಸ್ತರಗೊಂಡಿರುವ ಕುಟುಂಬಗಳಿಗೆ ವಸತಿ ಕಲ್ಪಿಸಲು ಗೋಕಾಕ‌ ನಗರದ ಸರಕಾರಿ ಮುನ್ಸಿಪಲ್‌ ಕಾಲೇಜಿನಲ್ಲಿ ಆರಂಭಿಸಲಾಗಿರುವ ಕಾಳಜಿ ಕೇಂದ್ರಕ್ಕೆ‌ ಮುಖ್ಯಮಂತ್ರಿ‌ ಸಿದ್ದರಾಮಯ್ಯನವರು ಭೇಟಿ ನೀಡಿ, ಸಂತ್ರಸ್ತರ‌ ಜತೆ‌ ಚರ್ಚಿಸಿದರು.

ಮನೆಗಳಿಗೆ ನೀರು ನುಗ್ಗಿದ ತಕ್ಷಣವೇ ಅಧಿಕಾರಿಗಳು ಕಾಳಜಿ ಕೇಂದ್ರಕಕ್ಕೆ ನಮ್ಮನ್ನು ಸ್ಥಳಾಂತರಿಸಿ ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಿರುತ್ತಾರೆ ಎಂದು ಸಂತ್ರಸ್ತ ಕುಟುಂಬವರು ಸಮಾಧಾನ ವ್ಯಕ್ತಪಡಿಸಿದರು.

ಸಂತ್ರಸ್ತರಿಗೆ ಊಟೋಪಹಾರ ಹಾಗೂ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು.

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್, ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!