ಜನ ಮನದ ನಾಡಿ ಮಿಡಿತ

Advertisement

ಭತ್ತ ಬೆಳೆಯುವ ಕಾಯಕಕ್ಕೆ ಶ್ರಮ ಅಗತ್ಯ; ಪುತ್ತೂರು ಶಾಸಕ ಅಶೋಕ್ ರೈ

 ಕೇವಲ ಕಾಟಾಚಾರ ಮತ್ತು ಪ್ರಚಾರಕ್ಕಾಗಿ ಹಡೀಲುಗದ್ದೆ ಬೇಸಾಯ ಎಂದು ಬಿಂಬಿಸುವ ಕೆಲಸ ಆಗಬಾರದು. ಇದರಿಂದ ಅನ್ನೊಂದಷ್ಟು ಮಂದಿ ಭತ್ತದ ಬೇಸಾಯದತ್ತ ದೃಷ್ಟಿ ಹರಿಸುವಂತಾಗಬೇಕು. ಹಾಗಾಗಿ ವ್ಯವಸ್ಥಿತ ರೀತಿಯಲ್ಲಿ ಭತ್ತದ ಬೇಸಾಯ ನಡೆಯಬೇಕು ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದ್ದಾರೆ.


ಇವರು ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಬಾರ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಯಾಂತ್ರೀಕೃತ ಬೇಸಾಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದ್ರು.
ಭತ್ತದ ಕೃಷಿಯನ್ನು ಆರಂಭ ಮಾಡುವುದು ಮುಖ್ಯವಲ್ಲ. ಅತ್ಯಂತ ಶ್ರದ್ಧೆಯಿಂದ ಅದನ್ನು ನೋಡಿಕೊಳ್ಳುವುದು. ಭತ್ತದಿಂದ ಅಕ್ಕಿ ತಯಾರಿಸುವ ತನಕ ಅದರ ಹಿಂದೆ ಶ್ರಮ ಪಡುವುದು ಅತೀ ಅಗತ್ಯ. ಈ ಹಿನ್ನಲೆಯಲ್ಲಿ ಭಕ್ತಾಧಿಗಳು, ಪುತ್ತೂರು ದೇವಳ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕೃಷಿ ಇಲಾಖೆಯನ್ನು ಜೋಡಿಸಿಕೊಂಡು ಭತ್ತ ಬೇಸಾಯ ನಡೆಸಲು ಚಿಂತನೆ ಮಾಡಲಾಗಿದೆ. ಇಲ್ಲಿ ಬೆಳೆಯುವ ಪೈರು ಹಾಗೂ ಭತ್ತದ ತೆನೆಗಳು ಜನತೆಯನ್ನು ಆಕರ್ಷಿಸುವ ರೀತಿಯಲ್ಲಿ ಬೆಳೆಯುವಂತೆ ಮಾಡುವ ಕೆಲಸ ನಡೆಯಬೇಕು. ದೇವಳದ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಅವರು ಪ್ರಾರ್ಥಿಸಿದ್ರು. ತೆಂಗಿನ ಕಾಯಿ ಒಡೆಯುವ ಮೂಲಕ ಯಾಂತ್ರೀಕೃತ ಉಳುಮೆಗೆ ಚಾಲನೆ ನೀಡಿದ ಶಾಸಕ ಅಶೋಕ್ ರೈ ಅವರು ನಂತರ ಟ್ರಾöಕ್ಟರ್ ಮೂಲಕ ಉಳುಮೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!