ಕೇವಲ ಕಾಟಾಚಾರ ಮತ್ತು ಪ್ರಚಾರಕ್ಕಾಗಿ ಹಡೀಲುಗದ್ದೆ ಬೇಸಾಯ ಎಂದು ಬಿಂಬಿಸುವ ಕೆಲಸ ಆಗಬಾರದು. ಇದರಿಂದ ಅನ್ನೊಂದಷ್ಟು ಮಂದಿ ಭತ್ತದ ಬೇಸಾಯದತ್ತ ದೃಷ್ಟಿ ಹರಿಸುವಂತಾಗಬೇಕು. ಹಾಗಾಗಿ ವ್ಯವಸ್ಥಿತ ರೀತಿಯಲ್ಲಿ ಭತ್ತದ ಬೇಸಾಯ ನಡೆಯಬೇಕು ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದ್ದಾರೆ.
ಇವರು ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಬಾರ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಯಾಂತ್ರೀಕೃತ ಬೇಸಾಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದ್ರು.
ಭತ್ತದ ಕೃಷಿಯನ್ನು ಆರಂಭ ಮಾಡುವುದು ಮುಖ್ಯವಲ್ಲ. ಅತ್ಯಂತ ಶ್ರದ್ಧೆಯಿಂದ ಅದನ್ನು ನೋಡಿಕೊಳ್ಳುವುದು. ಭತ್ತದಿಂದ ಅಕ್ಕಿ ತಯಾರಿಸುವ ತನಕ ಅದರ ಹಿಂದೆ ಶ್ರಮ ಪಡುವುದು ಅತೀ ಅಗತ್ಯ. ಈ ಹಿನ್ನಲೆಯಲ್ಲಿ ಭಕ್ತಾಧಿಗಳು, ಪುತ್ತೂರು ದೇವಳ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕೃಷಿ ಇಲಾಖೆಯನ್ನು ಜೋಡಿಸಿಕೊಂಡು ಭತ್ತ ಬೇಸಾಯ ನಡೆಸಲು ಚಿಂತನೆ ಮಾಡಲಾಗಿದೆ. ಇಲ್ಲಿ ಬೆಳೆಯುವ ಪೈರು ಹಾಗೂ ಭತ್ತದ ತೆನೆಗಳು ಜನತೆಯನ್ನು ಆಕರ್ಷಿಸುವ ರೀತಿಯಲ್ಲಿ ಬೆಳೆಯುವಂತೆ ಮಾಡುವ ಕೆಲಸ ನಡೆಯಬೇಕು. ದೇವಳದ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಅವರು ಪ್ರಾರ್ಥಿಸಿದ್ರು. ತೆಂಗಿನ ಕಾಯಿ ಒಡೆಯುವ ಮೂಲಕ ಯಾಂತ್ರೀಕೃತ ಉಳುಮೆಗೆ ಚಾಲನೆ ನೀಡಿದ ಶಾಸಕ ಅಶೋಕ್ ರೈ ಅವರು ನಂತರ ಟ್ರಾöಕ್ಟರ್ ಮೂಲಕ ಉಳುಮೆ ನಡೆಸಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…