ಕೇವಲ ಕಾಟಾಚಾರ ಮತ್ತು ಪ್ರಚಾರಕ್ಕಾಗಿ ಹಡೀಲುಗದ್ದೆ ಬೇಸಾಯ ಎಂದು ಬಿಂಬಿಸುವ ಕೆಲಸ ಆಗಬಾರದು. ಇದರಿಂದ ಅನ್ನೊಂದಷ್ಟು ಮಂದಿ ಭತ್ತದ ಬೇಸಾಯದತ್ತ ದೃಷ್ಟಿ ಹರಿಸುವಂತಾಗಬೇಕು. ಹಾಗಾಗಿ ವ್ಯವಸ್ಥಿತ ರೀತಿಯಲ್ಲಿ ಭತ್ತದ ಬೇಸಾಯ ನಡೆಯಬೇಕು ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದ್ದಾರೆ.
ಇವರು ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಬಾರ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಯಾಂತ್ರೀಕೃತ ಬೇಸಾಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದ್ರು.
ಭತ್ತದ ಕೃಷಿಯನ್ನು ಆರಂಭ ಮಾಡುವುದು ಮುಖ್ಯವಲ್ಲ. ಅತ್ಯಂತ ಶ್ರದ್ಧೆಯಿಂದ ಅದನ್ನು ನೋಡಿಕೊಳ್ಳುವುದು. ಭತ್ತದಿಂದ ಅಕ್ಕಿ ತಯಾರಿಸುವ ತನಕ ಅದರ ಹಿಂದೆ ಶ್ರಮ ಪಡುವುದು ಅತೀ ಅಗತ್ಯ. ಈ ಹಿನ್ನಲೆಯಲ್ಲಿ ಭಕ್ತಾಧಿಗಳು, ಪುತ್ತೂರು ದೇವಳ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕೃಷಿ ಇಲಾಖೆಯನ್ನು ಜೋಡಿಸಿಕೊಂಡು ಭತ್ತ ಬೇಸಾಯ ನಡೆಸಲು ಚಿಂತನೆ ಮಾಡಲಾಗಿದೆ. ಇಲ್ಲಿ ಬೆಳೆಯುವ ಪೈರು ಹಾಗೂ ಭತ್ತದ ತೆನೆಗಳು ಜನತೆಯನ್ನು ಆಕರ್ಷಿಸುವ ರೀತಿಯಲ್ಲಿ ಬೆಳೆಯುವಂತೆ ಮಾಡುವ ಕೆಲಸ ನಡೆಯಬೇಕು. ದೇವಳದ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಅವರು ಪ್ರಾರ್ಥಿಸಿದ್ರು. ತೆಂಗಿನ ಕಾಯಿ ಒಡೆಯುವ ಮೂಲಕ ಯಾಂತ್ರೀಕೃತ ಉಳುಮೆಗೆ ಚಾಲನೆ ನೀಡಿದ ಶಾಸಕ ಅಶೋಕ್ ರೈ ಅವರು ನಂತರ ಟ್ರಾöಕ್ಟರ್ ಮೂಲಕ ಉಳುಮೆ ನಡೆಸಿದ್ದಾರೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…