ಮಂಜೇಶ್ವರ: ವಿಶ್ವ ಹಿಂದೂ ಪರಿಷತ್ ಕಾಸರಗೋಡು ಜಿಲ್ಲಾ ಸಮಿತಿ ಮತ್ತು ಜೈನ್ ವೆಲ್ಫೇರ್ ಸಮಿತಿ ಬಂಗ್ರಮಂಜೇಶ್ವರ ಇದರ ಆಶ್ರಯದಲ್ಲಿ ನಿನ್ನೆ ಸಂಜೆ ಮಂಜೇಶ್ವರ ಜೈನ ಬಸದಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ , ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕುನಲ್ಲಿ ನಡೆದ ಜೈನ ಮುನಿಗಳ ಹತ್ಯೆಯನ್ನು ಖಂಡಿಸಿ ನಡೆದ ಮೌನ ಪ್ರತಿಭಟನೆಯನ್ನು ಉದ್ದೇಶಿಸಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂಸೇವಕರರೂ ಮಂಜೇಶ್ವರ ತಾಲೂಕು ಸಾಮರಸ್ಯ ಪ್ರಮುಖ್ ಆಗಿರುವ ಶ್ರೀ ವೀರಪ್ಪ ಅಂಬಾರ್ ರವರು ಜೈನ ಮುನಿಗಳ ಮೇಲೆ ನಡೆದ ಪೈಶಾಚಿಕ ಕೃತ್ಯವನ್ನು ಖಂಡಿಸಿ ಮಾತನಾಡಿದರು.
ಜೈನ ಕ್ಷೇತ್ರದಲ್ಲಿ ಹತ್ಯೆಗೊಳಗಾದ ಜೈನ ಮುನಿಗಳ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಸಾಮೂಹಿಕ ಪ್ರಾರ್ಥನೆ ನಡೆಸಲಾಯಿತು. ಬಳಿಕ ಎಲ್ಲರೂ ಹತ್ತು ನಿಮಿಷಗಳ ಕಾಲ ಮೌನವಾಗಿ ಕುಳಿತು ತಮ್ಮ ಪ್ರತಿಭಟನೆಯನ್ನು ಸೂಚಿಸಿದರು. ಜೈನ್ ವೆಲ್ಫೇರ್ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಶ್ರೀಲತಾ ಜೈನ್, ಬಸದಿಯ ಮೊಕ್ತೇಸರರಾದ ಶ್ರೀ ಯಶೋಧರ ಜೈನ್ ಅಡ್ವೋಕೇಟ್ ಸುದರ್ಶನ್ ಜೈನ್, ದಿನೇಶ್ ಜೈನ್ ಉಪಸ್ಥಿತರಿದ್ದರು. ವಿ.ಹಿಂ.ಪ ಕಾಸರಗೋಡು ಜಿಲ್ಲಾ ಉಪಾಧ್ಯಕ್ಷ ಶ್ರೀ ಶಂಕರ ಭಟ್ ಉಳುವಾನ, ಕೋಶಾಧಿಕಾರಿ ಎ. ಟಿ ನಾಯ್ಕ್, ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಸೌಮ್ಯ ಪ್ರಕಾಶ್, ಆನಂದ್ ಬಾಯಾರು, ಪ್ರೀತಿ ನಿಶಾನ್ ರೈ ,ಸಂಜೀವ ಶೆಟ್ಟಿ ಮಾಡ , ಸತ್ಯ ವೀರನಗರ , ಭಾಜಪ ಪದಾಧಿಕಾರಿಗಳಾದ ಅಶ್ವಿನಿ ಪಜ್ವ, ಹರಿಶ್ಚಂದ್ರ ಮಂಜೇಶ್ವರ, ಯಾದವ ಬಡಾಜೆ, ಆದರ್ಶ್ ಬಿ ಎಂ, ವಸಂತಕುಮಾರ್ ಮಯ್ಯ, ಸುನಿಲ್ ಅನಂತಪುರ, ಲೋಕೇಶ್ ನೋಂಡ, ಜೋಡುಕಲ್ಲು, ಸದಾಶಿವ ಚೇರಾಲು, ಭರತ್ ರೈ ಕೋಡಿಬೈಲು, ಕಿಶೋರ್ ಭಗವತಿ, ಚಂದ್ರಕಾಂತ ಶೆಟ್ಟಿ, ಕಾರ್ತಿಕ್ ಶೆಟ್ಟಿ, ಪರಿವಾರ ಸಂಘಟನೆಯ ಮೋಹನ್ ದಾಸ್ ಐಲ, ದಿನಕರ ಹೊಸಂಗಡಿ, ದೇವರಾಜ್, ಹೈಮೇಶ್ ಬಿ.ಎಂ, ಮಂಜೇಶ್ವರ, ಶಶಿಧರ್ ನಾಯ್ಕ್ ವರ್ಕಾಡಿ, ನಿಶಾರೇಖಾ ಐಲ, ರೋಹಿಣಿ ಐಲ, ಕಮಲ ಟೀಚರ್ ಬಾಯಾರು ಮತ್ತು ತಾಯಂದಿರು, ಸಹೋದರರು ಉಪಸ್ಥಿತರಿದ್ದರು.
ವಿಶ್ವ ಹಿಂದೂ ಪರಿಷತ್ ಮಾತೃ ಶಕ್ತಿ ಕಣ್ಣೂರು ವಿಭಾಗ ಪ್ರಮುಖ್ ಶ್ರೀಮತಿ ಮೀರಾ ಆಳ್ವ ಪ್ರಾಸ್ತಾವಿಕ ಮಾತುಗಳನ್ನಾಡಿ, ಸ್ವಾಗತಿಸಿದರು. ವಿ.ಹಿo.ಪ ಜಿಲ್ಲಾ ಸೇವಾ ಪ್ರಮುಖ್ ಶ್ರೀ ಸುರೇಶ್ ಶೆಟ್ಟಿ ಪರಂಕಿಲ ವಂದಿಸಿದರು. ಶಾಂತಿ ಮಂತ್ರದೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…