ತಾಲೂಕು ಮಟ್ಟದ 14 ಮತ್ತು 17ರ ವಯೋಮಾನದ ಕರಾಟೆ ಪಂದ್ಯಾಟದಲ್ಲಿ ಪುತ್ತೂರು ಬೆಥನಿ ಆಂಗ್ಲ ಮಾದ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ
ಕರ್ನಾಟಕ ಸರಕಾರ ಕ್ಷೇತ್ರ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲೆ ಪುತ್ತೂರು ಇವರ ಸಹಯೋಗದಲ್ಲಿ ಆಗಸ್ಟ್ 5ರಂದು ಪುತ್ತೂರು ಮಾಯ್ ದೆ ದೇವುಸ್ ಚರ್ಚ್ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ 14 ಮತ್ತು 17ರ ವಯೋಮಾನದ ಕರಾಟೆ ಪಂದ್ಯಾಟದಲ್ಲಿ ಪುತ್ತೂರು ಬೆಥನಿ ಆಂಗ್ಲ ಮಾದ್ಯಮ ಶಾಲೆಯ 9ನೇ ತರಗತಿಯ ಸ್ವರೂಪ್ ಕೃಷ್ಣ ಪ್ರಥಮ ಸ್ಥಾನ ಹಾಗು 9ನೇ ತರಗತಿಯ ರಿಶೋನ್ ಲಸ್ರಾದೋ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಸ್ವರೂಪ್ ಕೃಷ್ಣ ರವರು ಶ್ರೀಯುತ ಕೃಷ್ಣ ಪ್ರಸಾದ್ ಮತ್ತು ಸೌಮ್ಯ ರವರ ಪುತ್ರನಾಗಿದ್ದು ದೇವಿಪ್ರಸಾದ್ ರವರ ಶಿಷ್ಯರಾಗಿರುತ್ತಾರೆ.ರಿಶೋನ್ ಲಸ್ರಾದೋ ರವರು ಶ್ರೀಯುತ ರೋಶನ್ ಲಾಸ್ತಾದೋ ಮತ್ತು ಸುಶಾಂತಿ ರವರ ಪುತ್ರನಾಗಿದ್ದು ಸೆನ್ಸಾಯಿ ಮಾಧವ ಅಳಿಕೆ ಮತ್ತು ರೋಹಿತ್ ಎಸ್.ಎನ್ ರವರ ಶಿಶ್ಯರಾಗಿರುತ್ತಾರೆ.ಶಾಲೆಯ ದೈಹಿಕ ಶಿಕ್ಷಕರಾದ ಹರೀಶ್ ಹಾಗೂ ಮುಖ್ಯೋಪಾಧ್ಯಾಯಿನಿ ಭಗಿನಿ ಶಾಂತಿ ಆಗ್ನೆಸ್ ಬಿ.ಎಸ್ ರವರು ಮಾರ್ಗದರ್ಶನ ನೀಡಿರುತ್ತಾರೆ.
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…
ಪ್ರಚೋದನಾಕಾರಿ ಭಾಷಣ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎಸ್ಟಿಪಿಐ ಮುಖಂಡ ಮಹಮ್ಮದ್ ರಿಯಾಜ್ ಫರಂಗಿಪೇಟೆ…
ಬೀದಿ ನಾಯಿಗಳ ದಾಳಿಯಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ಪಟ್ಟಣದ ವಾರ್ಡ್…
ಮಳೆ ಬಂದಾಗಲೆಲ್ಲ ಕೃತಕ ನೆರೆ ಉಂಟಾಗಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತಿದ್ದ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ…
ಜಿಲ್ಲೆಯ ಯಲಬುರ್ಗಾ, ಕುಷ್ಟಗಿ ಹಾಗೂ ಕೊಪ್ಪಳ ತಾಲೂಕಿನ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರು ಗಂಭೀರ…