ಜನ ಮನದ ನಾಡಿ ಮಿಡಿತ

Advertisement

ಸಿಟಿಬಸ್‌ ನಿರ್ವಾಹಕನ ದರೋಡೆ ; ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ

ಬಸ್‌ ನಿಲುಗಡೆಗೊಳಿಸಿ ಮನೆಗೆ ಹೋಗುತ್ತಿದ್ದ ನಿರ್ವಾಹಕನ ಪರ್ಸ್‌ ಅನ್ನು ದರೋಡೆ ನಡೆಸಿರುವ ಘಟನೆ ಕೊಣಾಜೆ ಪೊಲೀಸ್‌ ಠಾಣಾ ವ್ಯಾಪ್ತಿಯ ಹರೇಕಳದಲ್ಲಿ ಸೋಮವಾರ ತಡರಾತ್ರಿ ನಡೆದಿದ್ದು, ಕೊಣಾಜೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹರೇಕಳ ಪಂಚಾಯಿತಿ ಬಳಿಯ ನಿವಾಸಿ, ಸ್ಟೇಟ್‌ ಬ್ಯಾಂಕ್‌ ಪಾವೂರು ಮಧ್ಯೆ ಚಲಿಸುವ ೫೫ ನಂಬರಿನ ಶ್ರೀ ಕಟೀಲ್‌ ಬಸ್‌ ನಿರ್ವಾಹಕ ಮಹಮ್ಮದ್‌ ಇಕ್ಬಾಲ್‌ ಎಂಬವರ ದರೋಡೆ ನಡೆದಿದೆ. ಆ.೫ ರ ಸಂಜೆ ಹರೇಕಳ ಡಿವೈ ಎಫ್‌ ಐ ಕಚೇರಿ ಸಮೀಪ ಜಾಗದಲ್ಲಿ ಬಸ್ಸನ್ನು ನಿಲ್ಲಿಸಲು ಬಂದ ಸಂದರ್ಭ ನಿರ್ವಾಹಕ ಇಕ್ಬಾಲ್‌ ಮುಂಚಿತವಾಗಿ ಇಳಿದು ಸ್ಥಳೀಯ ಅಂಗಡಿಗೆ ತೆರಳಿದ್ದರು. ಅಲ್ಲಿ ಮನೆಗೆ ಸಾಮಗ್ರಿ ಖರೀದಿಸಿ ಸಮೀಪದಲ್ಲೇ ಇರುವ ಮನೆಗೆ ಮೊಬೈಲ್‌ ಟಾರ್ಚ್‌ ಹಾಕಿಕೊಂಡು ನಡೆದುಕೊಂಡು ಹೋಗುವ ಸಂದರ್ಭ ಹಿಂದಿನಿಂದ ಬಂದ ಇಬ್ಬರು ಆಗಂತುಕರು ಕೈಗಳನ್ನು ಹಿಡಿದು, ಬಟ್ಟೆಯನ್ನು ಬಾಯಿಗೆ ತುರುಕಿ ಕೈಯ್ಯಲ್ಲಿದ್ದ ಅಂದು ದುಡಿಮೆ ನಡೆಸಿದ್ದ ರೂ.೧೩,೦೦೦ ದಷ್ಟು ನಗದು ಇದ್ದ ಪರ್ಸನ್ನು ಕಳವು ನಡೆದಿದ್ದಾರೆ. ನಿರ್ವಾಹಕ ಇಕ್ಬಾಲ್ ಬೊಬ್ಬೆ ಕೇಳಿ‌ ಸ್ಥಳೀಯರು ಹಾಗೂ ಕುಟುಂಬದವರು ಓಡಿಬಂದು , ನಾಟೆಕಲ್‌ ಕಣಚೂರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಳ್ಳರು ತಲೆಮರೆಸಿಕೊಂಡಿದ್ದಾರೆ. ಬಸ್ಸಿನಲ್ಲಿ ಇಬ್ಬರು ಯುವಕರು ನಿರ್ವಾಹಕನ ಜೊತೆ ವಾಗ್ವಾದಕ್ಕಿಳಿದಿದ್ದು, ಅದೇ ತಂಡ ಕೃತ್ಯ ಎಸಗಿರುವ ಸಾಧ್ಯತೆಯ ಮೇರೆಗೆ ಕೊಣಾಜೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!