ಬಸ್ ನಿಲುಗಡೆಗೊಳಿಸಿ ಮನೆಗೆ ಹೋಗುತ್ತಿದ್ದ ನಿರ್ವಾಹಕನ ಪರ್ಸ್ ಅನ್ನು ದರೋಡೆ ನಡೆಸಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಹರೇಕಳದಲ್ಲಿ ಸೋಮವಾರ ತಡರಾತ್ರಿ ನಡೆದಿದ್ದು, ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹರೇಕಳ ಪಂಚಾಯಿತಿ ಬಳಿಯ ನಿವಾಸಿ, ಸ್ಟೇಟ್ ಬ್ಯಾಂಕ್ ಪಾವೂರು ಮಧ್ಯೆ ಚಲಿಸುವ ೫೫ ನಂಬರಿನ ಶ್ರೀ ಕಟೀಲ್ ಬಸ್ ನಿರ್ವಾಹಕ ಮಹಮ್ಮದ್ ಇಕ್ಬಾಲ್ ಎಂಬವರ ದರೋಡೆ ನಡೆದಿದೆ. ಆ.೫ ರ ಸಂಜೆ ಹರೇಕಳ ಡಿವೈ ಎಫ್ ಐ ಕಚೇರಿ ಸಮೀಪ ಜಾಗದಲ್ಲಿ ಬಸ್ಸನ್ನು ನಿಲ್ಲಿಸಲು ಬಂದ ಸಂದರ್ಭ ನಿರ್ವಾಹಕ ಇಕ್ಬಾಲ್ ಮುಂಚಿತವಾಗಿ ಇಳಿದು ಸ್ಥಳೀಯ ಅಂಗಡಿಗೆ ತೆರಳಿದ್ದರು. ಅಲ್ಲಿ ಮನೆಗೆ ಸಾಮಗ್ರಿ ಖರೀದಿಸಿ ಸಮೀಪದಲ್ಲೇ ಇರುವ ಮನೆಗೆ ಮೊಬೈಲ್ ಟಾರ್ಚ್ ಹಾಕಿಕೊಂಡು ನಡೆದುಕೊಂಡು ಹೋಗುವ ಸಂದರ್ಭ ಹಿಂದಿನಿಂದ ಬಂದ ಇಬ್ಬರು ಆಗಂತುಕರು ಕೈಗಳನ್ನು ಹಿಡಿದು, ಬಟ್ಟೆಯನ್ನು ಬಾಯಿಗೆ ತುರುಕಿ ಕೈಯ್ಯಲ್ಲಿದ್ದ ಅಂದು ದುಡಿಮೆ ನಡೆಸಿದ್ದ ರೂ.೧೩,೦೦೦ ದಷ್ಟು ನಗದು ಇದ್ದ ಪರ್ಸನ್ನು ಕಳವು ನಡೆದಿದ್ದಾರೆ. ನಿರ್ವಾಹಕ ಇಕ್ಬಾಲ್ ಬೊಬ್ಬೆ ಕೇಳಿ ಸ್ಥಳೀಯರು ಹಾಗೂ ಕುಟುಂಬದವರು ಓಡಿಬಂದು , ನಾಟೆಕಲ್ ಕಣಚೂರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಳ್ಳರು ತಲೆಮರೆಸಿಕೊಂಡಿದ್ದಾರೆ. ಬಸ್ಸಿನಲ್ಲಿ ಇಬ್ಬರು ಯುವಕರು ನಿರ್ವಾಹಕನ ಜೊತೆ ವಾಗ್ವಾದಕ್ಕಿಳಿದಿದ್ದು, ಅದೇ ತಂಡ ಕೃತ್ಯ ಎಸಗಿರುವ ಸಾಧ್ಯತೆಯ ಮೇರೆಗೆ ಕೊಣಾಜೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…