ಜನ ಮನದ ನಾಡಿ ಮಿಡಿತ

Advertisement

ನೀರೊಳಗೆ 37 ಸೆಕೆಂಡ್ಸ್‌ನಲ್ಲಿ 26 ಪಲ್ಟಿ – ವಿಶ್ವ ದಾಖಲೆ

 

ಮಂಗಳೂರು: ಈಜುಕೊಳದ ನೀರೊಳಗೆ ಉಸಿರು ಬಿಗಿಹಿಡಿದು ೩೭ ಸೆಕೆಂಡ್ಸ್‌ಗಳಲ್ಲಿ ೨೬ ಸೋಮರ್ ಸಾಲ್ಟ್ಸ್ (ಪಲ್ಟಿ)ಗಳ ಮೂಲಕ ಮಂಗಳೂರಿನ ೧೩ರ ಹರೆಯದ ಪೋರ ನೊಬೆಲ್ ವಿಶ್ವ ದಾಖಲೆ ಸೃಷ್ಟಿಸಿದ್ದಾನೆ.


ಮಂಗಳೂರಿನ ಕಾರ್ಮೆಲ್ ಸಿಬಿಎಎಸ್ ಸಿ ಶಾಲೆಯ ೮ನೆ ತರಗತಿಯ ವಿದ್ಯಾರ್ಥಿಯಾಗಿರುವ ಹ್ಯಾಡ್ರಿಯನ್ ವೇಗಸ್ ಈ ನೂತನ ವಿಶ್ವ ದಾಖಲೆಯನ್ನು ಶನಿವಾರ ನಗರದ ಎಮ್ಮೆಕೆರೆ ಅಂತಾರಾಷ್ಟ್ರೀಯ ಈಜುಕೊಳದಲ್ಲಿ ಸೃಷ್ಟಿಸಿದ್ದಾನೆ. ೧೫ ವರ್ಷದೊಳಗೆ ಈ ನೀರೊಳಗಿನ ಪಲ್ಟಿ ಸಾಹಸ ಪ್ರಥಮ ದಾಖಲೆ ಎನ್ನಲಾಗಿದ್ದು, ಖ್ಯಾತ ಈಜುಪಟು ಚಂದ್ರಶೇಖರ ರೈ ಎಂಬವರು ಈ ಹಿಂದೆ ಹಿರಿಯ ವಿಭಾಗದಲ್ಲಿ ನೀರೊಳಗೆ ೧ ನಿಮಿಷ ೨ ಸೆಕೆಂಡುಗಳಲ್ಲಿ ೨೮ ಪಲ್ಟಿ ಹೊಡೆದಿರುವ ದಾಖಲೆ ಮಾಡಿದ್ದರು.
ನೊಬೆಲ್ ವಲ್ಡ್ ರೆಕಾರ್ಡ್ಸ್‌ನ ರಾಜ್ಯ ನಿರ್ದೇಶಕ ಡಾ. ಕೃಷ್ಣಮೂರ್ತಿ ಅವರು ಹ್ಯಾಡ್ರಿಯನ್ ಅವರ ಪಲ್ಟಿ ಸಾಹಸವನ್ನು ದಾಖಲಿಸಿಕೊಂಡರು.
‘ಸಾಮಾನ್ಯವಾಗಿ ಈಜುಕೊಳದ ಅಂಚು ಹಿಡಿದುಕೊಂಡು ಪಲ್ಟಿ ಹಾಕಲಾಗುತ್ತದೆ. ಆದರೆ ಈಜುಕೊಳದ ಮಧ್ಯ ನೀರಿನಲ್ಲಿ ಏಕಕಾಲಕ್ಕೆ ೨೬ ಪಲ್ಟಿ ಹೊಡೆಯುವುದು ಹ್ಯಾಡ್ರಿಯನ್ ಅವರ ದಾಖಲೆಯಾಗಿದ್ದು, ಆತನಿಗೆ ತರಬೇತಿ ನೀಡಿದ ನನಗೂ ಹೆಮ್ಮೆಯ ವಿಚಾರ’ ಎದು ಸ್ವಿಮ್ಮಿಂಗ್ ಕೋಚ್ ಅರೋಮಲ್ ಎ.ಎಸ್. ಸಂತಸ ವ್ಯಕ್ತಪಡಿಸಿದರು.
ನೊಬೆಲ್ ವಿಶ್ವದಾಖಲೆಯನ್ನು ದಾಖಲು ಮಾಡುವ ಸಂದರ್ಭ ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ನ ಜಿಎಂ ಅರುಣ್ ಪ್ರಭಾ, ಕ್ರೀಡಾ ಇಲಾಖೆಯ ಪ್ರವೀಣ್ ಡಿಸೋಜಾ, ಪ್ರೆಸ್ಟೀಜ್ ಇಂಟರ್ ನ್ಯಾಷನಲ್ ಶಾಲೆ, ಕಾರ್ಮೆಲ್ ಸಿಬಿಎಸ್ ಸಿ ಶಾಲೆಯ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಗಿನ್ನೆಸ್ ವಿಶ್ವ ದಾಖಲೆಯ ಗುರಿ…
‘ನನಗೆ ಸ್ವಿಮ್ಮಿಂಗ್ ಎಂದರೆ ತುಂಬಾ ಇಷ್ಟ. ಬೇಸಿಗೆ ರಜೆಯಲ್ಲಿ ನಾನು ಈಜು ತರಬೇತಿಗಾಗಿ ಬಂದಿದ್ದೆ. ಅಲ್ಲಿ ಅರೋಮಲ್ ನೀರೊಳಗೆ ಪಲ್ಟಿ ಬಗ್ಗೆ ಹೇಳಿಕೊಟ್ಟರು. ನಿರಂತರ ಅಭ್ಯಾಸ ಮಾಡಿದೆ. ಆರಂಭದಲ್ಲಿ ಏಳೆಂಟೆ ಪಲ್ಟಿ ಮಾಡುತ್ತಾ ತರಬೇತಿ ಅವಧಿಯಲ್ಲಿ ೨೩ ಪಲ್ಟಿ ಹೊಡೆಯಲು ಅಭ್ಯಾಸ ಮಾಡಿದ್ದೆ. ಇವತ್ತು ೨೬ ಪಲ್ಟಿ ಹೊಡೆದ ಬಗ್ಗೆ ಹೆಮ್ಮೆ ಆಗಿದೆ. ಮುಂದೆ ಗಿನ್ನೆಸ್ ವಿಶ್ವ ದಾಖಲೆ ಮಾಡುವ ಗುರಿ ಇದೆ’ ಎಂದಿದ್ದಾರೆ ಹ್ಯಾಡ್ರಿಯನ್ ವೇಗಸ್.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!