ಮಂಗಳೂರು: ಈಜುಕೊಳದ ನೀರೊಳಗೆ ಉಸಿರು ಬಿಗಿಹಿಡಿದು ೩೭ ಸೆಕೆಂಡ್ಸ್ಗಳಲ್ಲಿ ೨೬ ಸೋಮರ್ ಸಾಲ್ಟ್ಸ್ (ಪಲ್ಟಿ)ಗಳ ಮೂಲಕ ಮಂಗಳೂರಿನ ೧೩ರ ಹರೆಯದ ಪೋರ ನೊಬೆಲ್ ವಿಶ್ವ ದಾಖಲೆ ಸೃಷ್ಟಿಸಿದ್ದಾನೆ.
ಮಂಗಳೂರಿನ ಕಾರ್ಮೆಲ್ ಸಿಬಿಎಎಸ್ ಸಿ ಶಾಲೆಯ ೮ನೆ ತರಗತಿಯ ವಿದ್ಯಾರ್ಥಿಯಾಗಿರುವ ಹ್ಯಾಡ್ರಿಯನ್ ವೇಗಸ್ ಈ ನೂತನ ವಿಶ್ವ ದಾಖಲೆಯನ್ನು ಶನಿವಾರ ನಗರದ ಎಮ್ಮೆಕೆರೆ ಅಂತಾರಾಷ್ಟ್ರೀಯ ಈಜುಕೊಳದಲ್ಲಿ ಸೃಷ್ಟಿಸಿದ್ದಾನೆ. ೧೫ ವರ್ಷದೊಳಗೆ ಈ ನೀರೊಳಗಿನ ಪಲ್ಟಿ ಸಾಹಸ ಪ್ರಥಮ ದಾಖಲೆ ಎನ್ನಲಾಗಿದ್ದು, ಖ್ಯಾತ ಈಜುಪಟು ಚಂದ್ರಶೇಖರ ರೈ ಎಂಬವರು ಈ ಹಿಂದೆ ಹಿರಿಯ ವಿಭಾಗದಲ್ಲಿ ನೀರೊಳಗೆ ೧ ನಿಮಿಷ ೨ ಸೆಕೆಂಡುಗಳಲ್ಲಿ ೨೮ ಪಲ್ಟಿ ಹೊಡೆದಿರುವ ದಾಖಲೆ ಮಾಡಿದ್ದರು.
ನೊಬೆಲ್ ವಲ್ಡ್ ರೆಕಾರ್ಡ್ಸ್ನ ರಾಜ್ಯ ನಿರ್ದೇಶಕ ಡಾ. ಕೃಷ್ಣಮೂರ್ತಿ ಅವರು ಹ್ಯಾಡ್ರಿಯನ್ ಅವರ ಪಲ್ಟಿ ಸಾಹಸವನ್ನು ದಾಖಲಿಸಿಕೊಂಡರು.
‘ಸಾಮಾನ್ಯವಾಗಿ ಈಜುಕೊಳದ ಅಂಚು ಹಿಡಿದುಕೊಂಡು ಪಲ್ಟಿ ಹಾಕಲಾಗುತ್ತದೆ. ಆದರೆ ಈಜುಕೊಳದ ಮಧ್ಯ ನೀರಿನಲ್ಲಿ ಏಕಕಾಲಕ್ಕೆ ೨೬ ಪಲ್ಟಿ ಹೊಡೆಯುವುದು ಹ್ಯಾಡ್ರಿಯನ್ ಅವರ ದಾಖಲೆಯಾಗಿದ್ದು, ಆತನಿಗೆ ತರಬೇತಿ ನೀಡಿದ ನನಗೂ ಹೆಮ್ಮೆಯ ವಿಚಾರ’ ಎದು ಸ್ವಿಮ್ಮಿಂಗ್ ಕೋಚ್ ಅರೋಮಲ್ ಎ.ಎಸ್. ಸಂತಸ ವ್ಯಕ್ತಪಡಿಸಿದರು.
ನೊಬೆಲ್ ವಿಶ್ವದಾಖಲೆಯನ್ನು ದಾಖಲು ಮಾಡುವ ಸಂದರ್ಭ ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ನ ಜಿಎಂ ಅರುಣ್ ಪ್ರಭಾ, ಕ್ರೀಡಾ ಇಲಾಖೆಯ ಪ್ರವೀಣ್ ಡಿಸೋಜಾ, ಪ್ರೆಸ್ಟೀಜ್ ಇಂಟರ್ ನ್ಯಾಷನಲ್ ಶಾಲೆ, ಕಾರ್ಮೆಲ್ ಸಿಬಿಎಸ್ ಸಿ ಶಾಲೆಯ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಗಿನ್ನೆಸ್ ವಿಶ್ವ ದಾಖಲೆಯ ಗುರಿ…
‘ನನಗೆ ಸ್ವಿಮ್ಮಿಂಗ್ ಎಂದರೆ ತುಂಬಾ ಇಷ್ಟ. ಬೇಸಿಗೆ ರಜೆಯಲ್ಲಿ ನಾನು ಈಜು ತರಬೇತಿಗಾಗಿ ಬಂದಿದ್ದೆ. ಅಲ್ಲಿ ಅರೋಮಲ್ ನೀರೊಳಗೆ ಪಲ್ಟಿ ಬಗ್ಗೆ ಹೇಳಿಕೊಟ್ಟರು. ನಿರಂತರ ಅಭ್ಯಾಸ ಮಾಡಿದೆ. ಆರಂಭದಲ್ಲಿ ಏಳೆಂಟೆ ಪಲ್ಟಿ ಮಾಡುತ್ತಾ ತರಬೇತಿ ಅವಧಿಯಲ್ಲಿ ೨೩ ಪಲ್ಟಿ ಹೊಡೆಯಲು ಅಭ್ಯಾಸ ಮಾಡಿದ್ದೆ. ಇವತ್ತು ೨೬ ಪಲ್ಟಿ ಹೊಡೆದ ಬಗ್ಗೆ ಹೆಮ್ಮೆ ಆಗಿದೆ. ಮುಂದೆ ಗಿನ್ನೆಸ್ ವಿಶ್ವ ದಾಖಲೆ ಮಾಡುವ ಗುರಿ ಇದೆ’ ಎಂದಿದ್ದಾರೆ ಹ್ಯಾಡ್ರಿಯನ್ ವೇಗಸ್.
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…