ಮಂಗಳೂರು: ಪ್ರೀತಿ, ಪ್ರೇಮಕ್ಕೆ ದೇಶ, ಭಾಷೆ, ಜಾತಿ ಅಡ್ಡಿ ಅಲ್ಲ ಎಂಬುದಕ್ಕೆ ಮತ್ತೊಂದು ನಿದರ್ಶನ ಮಂಗಳೂರಿನಲ್ಲಿ ದೊರೆತಿದೆ. ಮಂಗಳೂರಿನ ಯುವಕ ಹಾಗೂ ಬ್ರೆಝಿಲ್ ಮೂಲದ ಯುವತಿಯ ಮದುವೆಯು ಆ.೯ರಂದು ನಗರದ ಟಿ. ವಿ. ರಮಣ ಪೈ ಸಭಾಂಗಣದಲ್ಲಿ ನಡೆದಿದೆ.
ಸುದೀರ್ಘ ಕಾಲದ ಪ್ರೀತಿಯ ಬಳಿಕ ಇವರು ಕರಾವಳಿ ನೆಲದಲ್ಲಿ ತುಳುನಾಡಿನ ಸಂಪ್ರದಾಯ ಪ್ರಕಾರವೇ ಮದುವೆಯಾಗಿ ಹೊಸ ಜೀವನ ಆರಂಭಿಸಿದ್ದಾರೆ.
ಬ್ರೆಝಿಲ್ ದೇಶದ ತಾಟಿಯಾನೆ ಹಾಗೂ ಮಂಗಳೂರಿನ ಜಿಎಸ್ ಬಿ ಸಮುದಾಯದ ಯುವಕ ಆದಿತ್ಯ ಅವರ ವಿವಾಹ ಸಮಾರಂಭ ಜಿಎಸ್ಬಿ ಸಂಪ್ರದಾಯದಂತೆ ನೆರವೇರಿದೆ.
ನಗರದ ಕರಂಗಲ್ಪಾಡಿ ನಿವಾಸಿ ಆದಿತ್ಯ ಎಂಟು ವರ್ಷಗಳ ಹಿಂದೆ ಐಟಿ ಉದ್ಯೋಗಕ್ಕಾಗಿ ಬ್ರೆಝಿಲ್ಗೆ ತೆರಳಿದ್ದರು. ೨೦೧೯ರಲ್ಲಿ ಇವರಿಗೆ ಜೊತೆಗೆ ಉದ್ಯೋಗ ಮಾಡುತ್ತಿದ್ದ ಯುವತಿ ಪರಿಚಯವಾಗಿ ಬಳಿಕ ಸ್ನೇಹಕ್ಕೆ ತಿರುಗಿತ್ತು. ೨೦೨೩ರಲ್ಲಿ ಇವರು ತಮ್ಮ ಮನೆಯವರಿಗೆ ಪ್ರೀತಿ ಪ್ರೇಮದ ವಿಷಯ ತಿಳಿಸಿ ಮದುವೆಗೆ ಒಪ್ಪಿಗೆ ಪಡೆದಿದ್ದರು. ಆದಿತ್ಯ ಹಾಗೂ ತಾಟಿಯಾನೆ ಅವರ ಜೋಡಿ ತಮ್ಮ ಹೆತ್ತವರು ಹಾಗೂ ಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ್ದಾರೆ.
ಪಾಶ್ಚಾತ್ಯ ಸಂಸ್ಕೃತಿಯಲ್ಲಿ ಬೆಳೆದು ಬಂದ ಯುವತಿ ತನ್ನ ಕೈಗೆ ಮೆಹಂದಿ ಹಚ್ಚಿ ಹಣೆಗೆ ಬಿಂದಿಗೆ ಧರಿಸಿ, ತಲೆಗೆ ಹೂ ಮುಡಿದು, ಭಾರತೀಯ ಸಂಪ್ರದಾಯದಂತೆ ಆಭರಣಗಳನ್ನು ಧರಿಸಿ ಅಗ್ನಿ ಸಾಕ್ಷಿಯಾಗಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ವಧುವಿನ ತಂದೆ ಅಟೀಲಿಯೊ, ತಾಯಿ ಲೂಸಿಯ, ಸಹೋದರಿಯರಾದ ಥಾಯಿಸ್, ಥಾಲಿತ್ ಹಾಗೂ ವರನ ಪೋಷಕರು, ಕುಟುಂಬಸ್ಥರು ಭಾಗವಹಿಸಿದ್ದರು.
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…
ಪ್ರಚೋದನಾಕಾರಿ ಭಾಷಣ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎಸ್ಟಿಪಿಐ ಮುಖಂಡ ಮಹಮ್ಮದ್ ರಿಯಾಜ್ ಫರಂಗಿಪೇಟೆ…
ಬೀದಿ ನಾಯಿಗಳ ದಾಳಿಯಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ಪಟ್ಟಣದ ವಾರ್ಡ್…
ಮಳೆ ಬಂದಾಗಲೆಲ್ಲ ಕೃತಕ ನೆರೆ ಉಂಟಾಗಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತಿದ್ದ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ…
ಜಿಲ್ಲೆಯ ಯಲಬುರ್ಗಾ, ಕುಷ್ಟಗಿ ಹಾಗೂ ಕೊಪ್ಪಳ ತಾಲೂಕಿನ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರು ಗಂಭೀರ…