ಮಂಗಳೂರು: ಪ್ರೀತಿ, ಪ್ರೇಮಕ್ಕೆ ದೇಶ, ಭಾಷೆ, ಜಾತಿ ಅಡ್ಡಿ ಅಲ್ಲ ಎಂಬುದಕ್ಕೆ ಮತ್ತೊಂದು ನಿದರ್ಶನ ಮಂಗಳೂರಿನಲ್ಲಿ ದೊರೆತಿದೆ. ಮಂಗಳೂರಿನ ಯುವಕ ಹಾಗೂ ಬ್ರೆಝಿಲ್ ಮೂಲದ ಯುವತಿಯ ಮದುವೆಯು ಆ.೯ರಂದು ನಗರದ ಟಿ. ವಿ. ರಮಣ ಪೈ ಸಭಾಂಗಣದಲ್ಲಿ ನಡೆದಿದೆ.
ಸುದೀರ್ಘ ಕಾಲದ ಪ್ರೀತಿಯ ಬಳಿಕ ಇವರು ಕರಾವಳಿ ನೆಲದಲ್ಲಿ ತುಳುನಾಡಿನ ಸಂಪ್ರದಾಯ ಪ್ರಕಾರವೇ ಮದುವೆಯಾಗಿ ಹೊಸ ಜೀವನ ಆರಂಭಿಸಿದ್ದಾರೆ.
ಬ್ರೆಝಿಲ್ ದೇಶದ ತಾಟಿಯಾನೆ ಹಾಗೂ ಮಂಗಳೂರಿನ ಜಿಎಸ್ ಬಿ ಸಮುದಾಯದ ಯುವಕ ಆದಿತ್ಯ ಅವರ ವಿವಾಹ ಸಮಾರಂಭ ಜಿಎಸ್ಬಿ ಸಂಪ್ರದಾಯದಂತೆ ನೆರವೇರಿದೆ.
ನಗರದ ಕರಂಗಲ್ಪಾಡಿ ನಿವಾಸಿ ಆದಿತ್ಯ ಎಂಟು ವರ್ಷಗಳ ಹಿಂದೆ ಐಟಿ ಉದ್ಯೋಗಕ್ಕಾಗಿ ಬ್ರೆಝಿಲ್ಗೆ ತೆರಳಿದ್ದರು. ೨೦೧೯ರಲ್ಲಿ ಇವರಿಗೆ ಜೊತೆಗೆ ಉದ್ಯೋಗ ಮಾಡುತ್ತಿದ್ದ ಯುವತಿ ಪರಿಚಯವಾಗಿ ಬಳಿಕ ಸ್ನೇಹಕ್ಕೆ ತಿರುಗಿತ್ತು. ೨೦೨೩ರಲ್ಲಿ ಇವರು ತಮ್ಮ ಮನೆಯವರಿಗೆ ಪ್ರೀತಿ ಪ್ರೇಮದ ವಿಷಯ ತಿಳಿಸಿ ಮದುವೆಗೆ ಒಪ್ಪಿಗೆ ಪಡೆದಿದ್ದರು. ಆದಿತ್ಯ ಹಾಗೂ ತಾಟಿಯಾನೆ ಅವರ ಜೋಡಿ ತಮ್ಮ ಹೆತ್ತವರು ಹಾಗೂ ಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ್ದಾರೆ.
ಪಾಶ್ಚಾತ್ಯ ಸಂಸ್ಕೃತಿಯಲ್ಲಿ ಬೆಳೆದು ಬಂದ ಯುವತಿ ತನ್ನ ಕೈಗೆ ಮೆಹಂದಿ ಹಚ್ಚಿ ಹಣೆಗೆ ಬಿಂದಿಗೆ ಧರಿಸಿ, ತಲೆಗೆ ಹೂ ಮುಡಿದು, ಭಾರತೀಯ ಸಂಪ್ರದಾಯದಂತೆ ಆಭರಣಗಳನ್ನು ಧರಿಸಿ ಅಗ್ನಿ ಸಾಕ್ಷಿಯಾಗಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ವಧುವಿನ ತಂದೆ ಅಟೀಲಿಯೊ, ತಾಯಿ ಲೂಸಿಯ, ಸಹೋದರಿಯರಾದ ಥಾಯಿಸ್, ಥಾಲಿತ್ ಹಾಗೂ ವರನ ಪೋಷಕರು, ಕುಟುಂಬಸ್ಥರು ಭಾಗವಹಿಸಿದ್ದರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…