ಮಂಗಳೂರು: ಪ್ರೀತಿ, ಪ್ರೇಮಕ್ಕೆ ದೇಶ, ಭಾಷೆ, ಜಾತಿ ಅಡ್ಡಿ ಅಲ್ಲ ಎಂಬುದಕ್ಕೆ ಮತ್ತೊಂದು ನಿದರ್ಶನ ಮಂಗಳೂರಿನಲ್ಲಿ ದೊರೆತಿದೆ. ಮಂಗಳೂರಿನ ಯುವಕ ಹಾಗೂ ಬ್ರೆಝಿಲ್ ಮೂಲದ ಯುವತಿಯ ಮದುವೆಯು ಆ.೯ರಂದು ನಗರದ ಟಿ. ವಿ. ರಮಣ ಪೈ ಸಭಾಂಗಣದಲ್ಲಿ ನಡೆದಿದೆ.
ಸುದೀರ್ಘ ಕಾಲದ ಪ್ರೀತಿಯ ಬಳಿಕ ಇವರು ಕರಾವಳಿ ನೆಲದಲ್ಲಿ ತುಳುನಾಡಿನ ಸಂಪ್ರದಾಯ ಪ್ರಕಾರವೇ ಮದುವೆಯಾಗಿ ಹೊಸ ಜೀವನ ಆರಂಭಿಸಿದ್ದಾರೆ.
ಬ್ರೆಝಿಲ್ ದೇಶದ ತಾಟಿಯಾನೆ ಹಾಗೂ ಮಂಗಳೂರಿನ ಜಿಎಸ್ ಬಿ ಸಮುದಾಯದ ಯುವಕ ಆದಿತ್ಯ ಅವರ ವಿವಾಹ ಸಮಾರಂಭ ಜಿಎಸ್ಬಿ ಸಂಪ್ರದಾಯದಂತೆ ನೆರವೇರಿದೆ.
ನಗರದ ಕರಂಗಲ್ಪಾಡಿ ನಿವಾಸಿ ಆದಿತ್ಯ ಎಂಟು ವರ್ಷಗಳ ಹಿಂದೆ ಐಟಿ ಉದ್ಯೋಗಕ್ಕಾಗಿ ಬ್ರೆಝಿಲ್ಗೆ ತೆರಳಿದ್ದರು. ೨೦೧೯ರಲ್ಲಿ ಇವರಿಗೆ ಜೊತೆಗೆ ಉದ್ಯೋಗ ಮಾಡುತ್ತಿದ್ದ ಯುವತಿ ಪರಿಚಯವಾಗಿ ಬಳಿಕ ಸ್ನೇಹಕ್ಕೆ ತಿರುಗಿತ್ತು. ೨೦೨೩ರಲ್ಲಿ ಇವರು ತಮ್ಮ ಮನೆಯವರಿಗೆ ಪ್ರೀತಿ ಪ್ರೇಮದ ವಿಷಯ ತಿಳಿಸಿ ಮದುವೆಗೆ ಒಪ್ಪಿಗೆ ಪಡೆದಿದ್ದರು. ಆದಿತ್ಯ ಹಾಗೂ ತಾಟಿಯಾನೆ ಅವರ ಜೋಡಿ ತಮ್ಮ ಹೆತ್ತವರು ಹಾಗೂ ಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ್ದಾರೆ.
ಪಾಶ್ಚಾತ್ಯ ಸಂಸ್ಕೃತಿಯಲ್ಲಿ ಬೆಳೆದು ಬಂದ ಯುವತಿ ತನ್ನ ಕೈಗೆ ಮೆಹಂದಿ ಹಚ್ಚಿ ಹಣೆಗೆ ಬಿಂದಿಗೆ ಧರಿಸಿ, ತಲೆಗೆ ಹೂ ಮುಡಿದು, ಭಾರತೀಯ ಸಂಪ್ರದಾಯದಂತೆ ಆಭರಣಗಳನ್ನು ಧರಿಸಿ ಅಗ್ನಿ ಸಾಕ್ಷಿಯಾಗಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ವಧುವಿನ ತಂದೆ ಅಟೀಲಿಯೊ, ತಾಯಿ ಲೂಸಿಯ, ಸಹೋದರಿಯರಾದ ಥಾಯಿಸ್, ಥಾಲಿತ್ ಹಾಗೂ ವರನ ಪೋಷಕರು, ಕುಟುಂಬಸ್ಥರು ಭಾಗವಹಿಸಿದ್ದರು.
ಮಂಗಳೂರು: ಮಹಿಳಾ ಮೀಸಲಾತಿ ಮಸೂದೆಗೆ ಸಂಬಂಧಿಸಿದಂತೆ ರಾಜಕೀಯ ವಲಯದಲ್ಲಿ ಉಂಟಾಗಿರುವ ಬೆಳವಣಿಗೆಗಳ ವಿರುದ್ಧ ಮಂಗಳೂರಿನ ಮಿನಿ ವಿಧಾನಸೌಧ ಎದುರು ಜಾತ್ಯತೀತ…
ನಿಟ್ಟೆ ವಿಶ್ವವಿದ್ಯಾನಿಲಯದ ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಷನ್ ವತಿಯಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ಅಂತರರಾಷ್ಟ್ರೀಯ ಸಮಾವೇಶ 2026 ಬುಧವಾರ ಸಮಾಪನಗೊಂಡಿತು.…
ಕಾಲೇಜು ಪ್ರವಾಸ ಹೊರಟಿದ್ದ ಬಸ್ಸೊಂದು ರಸ್ತೆ ಬದಿ ನಿಂತಿದ್ದ ಟ್ಯಾಂಕರ್ ಮತ್ತು ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಇಬ್ಬರು…
2022ರಲ್ಲಿ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ತಾಯಿ-ಮಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ಉಡುಪಿ…
ಸುಳ್ಯ ತಾಲೂಕಿನ ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆ.ಎಸ್.ಆರ್.ಟಿ.ಸಿ ಸುಳ್ಯ ಕೊಯನಾಡು ಸರ್ವಿಸ್ ಬಸ್ಸು…
ನದಿಯಲ್ಲಿ ಸ್ನಾನ ಮಾಡುಲು ತೆರಳಿದ್ದ ವ್ಯಕ್ತಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಹಾವೇರಿಯ ಕಿರಗೆರೆ ಗ್ರಾಮದ ಬಳಿ ಇರುವ…