ಜನ ಮನದ ನಾಡಿ ಮಿಡಿತ

Advertisement

ಈ ಬಾರಿ ಶಿವಮೊಗ್ಗದಲ್ಲೂ ಕಂಬಳ: ಅ.26ರಂದು ಬೆಂಗಳೂರಿನಿಂದ ಆರಂಭ

ಮೂಡುಬಿದಿರೆ: ಬೆಂಗಳೂರಿನಲ್ಲಿ ಅ.26ರಂದು ಕಂಬಳ ನಡೆಯುವ ಮೂಲಕ ಈ ಬಾರಿಯ ಕಂಬಳ ಋತು ಆರಂಭವಾಗಲಿದೆ. ಬಳಿಕ ಕರಾವಳಿಯಾದ್ಯಂತ ಕಂಬಳಗಳು ನಡೆಯಲಿವೆ. ಎ.19ರಂದು ಶಿವಮೊಗ್ಗದಲ್ಲಿ ಇದೇ ಮೊದಲ ಬಾರಿಗೆ ಕಂಬಳ ನಡೆಯುವ ಮೂಲಕ ಕಂಬಳ ಋತು ಮುಕ್ತಾಯವಾಗಲಿದೆ. ಜಿಲ್ಲಾ ಕಂಬಳ ಸಮಿತಿ ನೇತೃತ್ವದಲ್ಲಿ ಒಟ್ಟು 26 ಕಂಬಳಗಳು ಈ ಸಲ ನಡೆಯಲಿವೆ ಎಂದು ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಬೆಳಪು ಡಾ| ದೇವಿಪ್ರಸಾದ್‌ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಕಂಬಳವನ್ನು ಶಿಸ್ತುಬದ್ಧವಾಗಿ ಕಂಬಳ ನಡೆಯುತ್ತಿರುವುದಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದ್ದು, ಇದನ್ನು ಮತ್ತಷ್ಟು ಸುವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಕಂಬಳ ಸಮಿತಿಗಳು ಪಾಲಿಸಬೇಕಾದ ಕೆಲವು ಉಪನಿಬಂಧನೆಗಳನ್ನು ರಚಿಸಲಾಗುವುದು. ಕಂಬಳ ವಿಳಂಬವಾಗುತ್ತಿರುವುದನ್ನು ನಿಯಂತ್ರಿಸಲೂ ನಿಯಮಗಳನ್ನು ರೂಪಿಸಲಾಗುವುದು. ಓಟಗಾರರು ಎಷ್ಟು ಜತೆ ಕೋಣಗಳನ್ನು ಓಡಿಸಬಹುದು ಮುಂತಾದ ನಿಯಮ ರೂಪಿಸಲಾಗುತ್ತಿದೆ ಎಂದರು.

Stage set for Bengaluru's first Kambala event in longest race track.  Details | Bengaluru - Hindustan Times

ಮತ್ತೆ ನಡೆಯಲಿದೆ ಪಿಲಿಕುಳ ಕಂಬಳ

ಪಿಲಿಕುಳ ಕಂಬಳವನ್ನು ಈ ವರ್ಷದಿಂದ ಪುನರಾರಂಭಿಸಲಾಗುವುದು. ಕಂಬಳ ವನ್ನು ಪ್ರವಾಸೋದ್ಯಮದ ಭಾಗವಾಗಿಸುವ ನಿಟ್ಟಿನಲ್ಲಿ ಕಂಬಳ ಕುರಿತ ವಸ್ತು ಪ್ರದರ್ಶನ ಸಹಿತ 4 ದಿನಗಳ “ತುಳುನಾಡ ವೈಭವ’ ಕಾರ್ಯಕ್ರಮ ಏರ್ಪಡಿಸಲಾಗುವುದು. ಬಹಳ ಮುಖ್ಯವಾಗಿ, ವಸ್ತು ಪ್ರದರ್ಶನಾಲಯ ಸಹಿತ ಕಂಬಳ ಭವನ ನಿರ್ಮಿಸಲಾಗುವುದು. ಈ ಜಿಲ್ಲೆಯಲ್ಲಿ ನಡೆಯುವ 24 ಕಂಬಳಗಳಿಗೂ ತಲಾ 5 ಲಕ್ಷ ರೂ.ಯಂತೆ ಸರಕಾರ ಅನುದಾನ ಬಿಡುಗಡೆ ಮಾಡಬೇಕೆಂಬ ಮನವಿಯನ್ನು ಕಂಬಳ ನಿಯೋಗವು ಸಿಎಂಗೆ ಸಲ್ಲಿಸಿದ್ದು, ಅವರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.

ಕಂಬಳ ಸಮಿತಿ ಗೌರವಾಧ್ಯಕ್ಷ ಎರ್ಮಾಳ್‌ ರೋಹಿತ್‌ ಹೆಗ್ಡೆ ಸಹಿತ ಪ್ರಮುಖರು ಉಪಸ್ಥಿತರಿದ್ದರು.

File:Pilikula Kambala, Mangalore.jpg - Wikimedia Commons

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!