ಮೂಡುಬಿದಿರೆ: ಬೆಂಗಳೂರಿನಲ್ಲಿ ಅ.26ರಂದು ಕಂಬಳ ನಡೆಯುವ ಮೂಲಕ ಈ ಬಾರಿಯ ಕಂಬಳ ಋತು ಆರಂಭವಾಗಲಿದೆ. ಬಳಿಕ ಕರಾವಳಿಯಾದ್ಯಂತ ಕಂಬಳಗಳು ನಡೆಯಲಿವೆ. ಎ.19ರಂದು ಶಿವಮೊಗ್ಗದಲ್ಲಿ ಇದೇ ಮೊದಲ ಬಾರಿಗೆ ಕಂಬಳ ನಡೆಯುವ ಮೂಲಕ ಕಂಬಳ ಋತು ಮುಕ್ತಾಯವಾಗಲಿದೆ. ಜಿಲ್ಲಾ ಕಂಬಳ ಸಮಿತಿ ನೇತೃತ್ವದಲ್ಲಿ ಒಟ್ಟು 26 ಕಂಬಳಗಳು ಈ ಸಲ ನಡೆಯಲಿವೆ ಎಂದು ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಬೆಳಪು ಡಾ| ದೇವಿಪ್ರಸಾದ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಕಂಬಳವನ್ನು ಶಿಸ್ತುಬದ್ಧವಾಗಿ ಕಂಬಳ ನಡೆಯುತ್ತಿರುವುದಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದ್ದು, ಇದನ್ನು ಮತ್ತಷ್ಟು ಸುವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಕಂಬಳ ಸಮಿತಿಗಳು ಪಾಲಿಸಬೇಕಾದ ಕೆಲವು ಉಪನಿಬಂಧನೆಗಳನ್ನು ರಚಿಸಲಾಗುವುದು. ಕಂಬಳ ವಿಳಂಬವಾಗುತ್ತಿರುವುದನ್ನು ನಿಯಂತ್ರಿಸಲೂ ನಿಯಮಗಳನ್ನು ರೂಪಿಸಲಾಗುವುದು. ಓಟಗಾರರು ಎಷ್ಟು ಜತೆ ಕೋಣಗಳನ್ನು ಓಡಿಸಬಹುದು ಮುಂತಾದ ನಿಯಮ ರೂಪಿಸಲಾಗುತ್ತಿದೆ ಎಂದರು.
ಮತ್ತೆ ನಡೆಯಲಿದೆ ಪಿಲಿಕುಳ ಕಂಬಳ
ಪಿಲಿಕುಳ ಕಂಬಳವನ್ನು ಈ ವರ್ಷದಿಂದ ಪುನರಾರಂಭಿಸಲಾಗುವುದು. ಕಂಬಳ ವನ್ನು ಪ್ರವಾಸೋದ್ಯಮದ ಭಾಗವಾಗಿಸುವ ನಿಟ್ಟಿನಲ್ಲಿ ಕಂಬಳ ಕುರಿತ ವಸ್ತು ಪ್ರದರ್ಶನ ಸಹಿತ 4 ದಿನಗಳ “ತುಳುನಾಡ ವೈಭವ’ ಕಾರ್ಯಕ್ರಮ ಏರ್ಪಡಿಸಲಾಗುವುದು. ಬಹಳ ಮುಖ್ಯವಾಗಿ, ವಸ್ತು ಪ್ರದರ್ಶನಾಲಯ ಸಹಿತ ಕಂಬಳ ಭವನ ನಿರ್ಮಿಸಲಾಗುವುದು. ಈ ಜಿಲ್ಲೆಯಲ್ಲಿ ನಡೆಯುವ 24 ಕಂಬಳಗಳಿಗೂ ತಲಾ 5 ಲಕ್ಷ ರೂ.ಯಂತೆ ಸರಕಾರ ಅನುದಾನ ಬಿಡುಗಡೆ ಮಾಡಬೇಕೆಂಬ ಮನವಿಯನ್ನು ಕಂಬಳ ನಿಯೋಗವು ಸಿಎಂಗೆ ಸಲ್ಲಿಸಿದ್ದು, ಅವರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.
ಕಂಬಳ ಸಮಿತಿ ಗೌರವಾಧ್ಯಕ್ಷ ಎರ್ಮಾಳ್ ರೋಹಿತ್ ಹೆಗ್ಡೆ ಸಹಿತ ಪ್ರಮುಖರು ಉಪಸ್ಥಿತರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…