ರಾಷ್ಟ್ರ

ನವಿಲು ಮಾಂಸದ ಸಾರು ತಯಾರಿಸಿ ಯೂಟ್ಯೂಬ್​ನಲ್ಲಿ ಶೇರ್​ ಮಾಡಿದ ಯೂಟ್ಯೂಬರ್ ಅರೆಸ್ಟ್!

ಸಾಂಪ್ರದಾಯಿಕ ರೀತಿಯಲ್ಲಿ ನವಿಲು ಸಾಂಬಾರ್​ ಮಾಡುವುದು ಹೇಗೆ ಎಂಬ ಪಾಕವಿಧಾನವನ್ನು ತನ್ನ ಯೂಟ್ಯೂಬ್‌ ಚಾನಲ್​ನಲ್ಲಿ ಅಪ್‌ಲೋಡ್ ಮಾಡಿದ್ದ ಯೂಟ್ಯೂಬರ್ ಓರ್ವನನ್ನು ಬಂಧಿಸಲಾಗಿದೆ.

ತೆಲಂಗಾಣದ ರಾಜಣ್ಣ ಸಿರಿಸಿಲ್ಲ ಜಿಲ್ಲೆಯ ತಂಗಲ್ಲಪಲ್ಲಿ ಮಂಡಲ ನಿವಾಸಿಯಾಗಿರುವ ಯೂಟ್ಯೂಬರ್ ಕೋಡಂ ಪ್ರಣಯ್​, ಸಾಂಪ್ರದಾಯಿಕ ರೀತಿಯಲ್ಲಿ ನವಿಲು ಸಾಂಬಾರ್​ ಮಾಡುವುದು ಹೇಗೆ ಎಂಬ ಪಾಕವಿಧಾನವನ್ನು ತನ್ನ ಯೂಟ್ಯೂಬ್‌ ಚಾನಲ್​ನಲ್ಲಿ ಅಪ್‌ಲೋಡ್ ಮಾಡಿದ್ದ. ಅಷ್ಟೇ ಅಲ್ಲ, ಥಂಬ್‌ನೈಲ್​ನಲ್ಲಿ ನವಿಲು ಚಿತ್ರವನ್ನು ಹಾಕಿ ಅಪ್​ಲೋಡ್​ ಮಾಡಿದ್ದ.

ಈ ವಿಡಿಯೋ ನೋಡಿದ ನೆಟ್ಟಿಗರು ಕೋಡಂ ಪ್ರಣಯ್ ವಿರುದ್ಧ ಭಾರಿ ಆಕ್ರೋಶ ವ್ಯಕ್ತಪಡಿಸಿದ್ದರು. ಯಾವಾಗ ಭಾರಿ ವಿರೋಧ ವ್ಯಕ್ತವಾಗಿದೆ ಎಂಬ ಗೊತ್ತಾಯಿತೋ ತಕ್ಷಣ ವಿಡಿಯೋವನ್ನು ಯೂಟ್ಯೂಬ್​ನಿಂದ ಪ್ರಣಯ್​ ಡಿಲೀಟ್​ ಮಾಡಿದ್ದಾರೆ. ಆದರೂ ಅಷ್ಟರಲ್ಲೇ ಈ ವಿಷಯ ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿದಿದೆ. ಇದೀಗ ಪ್ರಣಯ್ ನನ್ನು ವಶಕ್ಕೆ ಪಡೆದು ಆತನಿಂದ ನವಿಲು ಗರಿ ಹಾಗೂ ಸಾಂಬರ್​ ಅನ್ನು ವಶಪಡಿಸಿಕೊಂಡಿದ್ದಾರೆ.

ಸದ್ಯ ವಶಕ್ಕೆ ಪಡೆದಿರುವುದನ್ನು ಅಧಿಕಾರಿಗಳು ಲ್ಯಾಬ್‌ಗೆ ಕಳುಹಿಸಿದ್ದಾರೆ. ಒಂದು ವೇಳೆ ಅದು ನವಿಲು ಖಾದ್ಯ ಎಂಬುದು ಕಂಡುಬಂದಲ್ಲಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…

18 hours ago

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…

18 hours ago

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…

19 hours ago

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…

2 days ago

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…

2 days ago

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…

2 days ago