ಸಾಂಪ್ರದಾಯಿಕ ರೀತಿಯಲ್ಲಿ ನವಿಲು ಸಾಂಬಾರ್ ಮಾಡುವುದು ಹೇಗೆ ಎಂಬ ಪಾಕವಿಧಾನವನ್ನು ತನ್ನ ಯೂಟ್ಯೂಬ್ ಚಾನಲ್ನಲ್ಲಿ ಅಪ್ಲೋಡ್ ಮಾಡಿದ್ದ ಯೂಟ್ಯೂಬರ್ ಓರ್ವನನ್ನು ಬಂಧಿಸಲಾಗಿದೆ.
ತೆಲಂಗಾಣದ ರಾಜಣ್ಣ ಸಿರಿಸಿಲ್ಲ ಜಿಲ್ಲೆಯ ತಂಗಲ್ಲಪಲ್ಲಿ ಮಂಡಲ ನಿವಾಸಿಯಾಗಿರುವ ಯೂಟ್ಯೂಬರ್ ಕೋಡಂ ಪ್ರಣಯ್, ಸಾಂಪ್ರದಾಯಿಕ ರೀತಿಯಲ್ಲಿ ನವಿಲು ಸಾಂಬಾರ್ ಮಾಡುವುದು ಹೇಗೆ ಎಂಬ ಪಾಕವಿಧಾನವನ್ನು ತನ್ನ ಯೂಟ್ಯೂಬ್ ಚಾನಲ್ನಲ್ಲಿ ಅಪ್ಲೋಡ್ ಮಾಡಿದ್ದ. ಅಷ್ಟೇ ಅಲ್ಲ, ಥಂಬ್ನೈಲ್ನಲ್ಲಿ ನವಿಲು ಚಿತ್ರವನ್ನು ಹಾಕಿ ಅಪ್ಲೋಡ್ ಮಾಡಿದ್ದ.
ಈ ವಿಡಿಯೋ ನೋಡಿದ ನೆಟ್ಟಿಗರು ಕೋಡಂ ಪ್ರಣಯ್ ವಿರುದ್ಧ ಭಾರಿ ಆಕ್ರೋಶ ವ್ಯಕ್ತಪಡಿಸಿದ್ದರು. ಯಾವಾಗ ಭಾರಿ ವಿರೋಧ ವ್ಯಕ್ತವಾಗಿದೆ ಎಂಬ ಗೊತ್ತಾಯಿತೋ ತಕ್ಷಣ ವಿಡಿಯೋವನ್ನು ಯೂಟ್ಯೂಬ್ನಿಂದ ಪ್ರಣಯ್ ಡಿಲೀಟ್ ಮಾಡಿದ್ದಾರೆ. ಆದರೂ ಅಷ್ಟರಲ್ಲೇ ಈ ವಿಷಯ ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿದಿದೆ. ಇದೀಗ ಪ್ರಣಯ್ ನನ್ನು ವಶಕ್ಕೆ ಪಡೆದು ಆತನಿಂದ ನವಿಲು ಗರಿ ಹಾಗೂ ಸಾಂಬರ್ ಅನ್ನು ವಶಪಡಿಸಿಕೊಂಡಿದ್ದಾರೆ.
ಸದ್ಯ ವಶಕ್ಕೆ ಪಡೆದಿರುವುದನ್ನು ಅಧಿಕಾರಿಗಳು ಲ್ಯಾಬ್ಗೆ ಕಳುಹಿಸಿದ್ದಾರೆ. ಒಂದು ವೇಳೆ ಅದು ನವಿಲು ಖಾದ್ಯ ಎಂಬುದು ಕಂಡುಬಂದಲ್ಲಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೀದಿ ನಾಯಿಗಳ ದಾಳಿಯಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ಪಟ್ಟಣದ ವಾರ್ಡ್…
ಮಳೆ ಬಂದಾಗಲೆಲ್ಲ ಕೃತಕ ನೆರೆ ಉಂಟಾಗಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತಿದ್ದ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ…
ಜಿಲ್ಲೆಯ ಯಲಬುರ್ಗಾ, ಕುಷ್ಟಗಿ ಹಾಗೂ ಕೊಪ್ಪಳ ತಾಲೂಕಿನ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರು ಗಂಭೀರ…
ಸಾಮಾನ್ಯವಾಗಿ 18ನೇ ವಯಸ್ಸಿನಲ್ಲಿ ಯುವಕರು ಕಾಲೇಜು ಶಿಕ್ಷಣವನ್ನು ಆರಂಭಿಸುತ್ತಾರೆ. ಆದರೆ ಅಮೆರಿಕದ ಫ್ಲೋರಿಡಾ ಮೂಲದ ನಾಥನ್ ಥಾಮಸ್ ಇದೇ ವಯಸ್ಸಿನಲ್ಲಿ…
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…