ಮಂಜೇಶ್ವರ: A.I.S.F ಮಂಜೇಶ್ವರ ಮಂಡಲ ಸಮಾವೇಶವು ಮಜಿಬೈಲ್ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ತನಿಷ್ ಕರಿಬೈಲ್ ಅಧ್ಯಕ್ಷತೆ ವಹಿಸಿದರು. ಮೊದಲಿಗೆ ಹುತಾತ್ಮರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ರಕ್ತ ಸಾಕ್ಷಿ ಪ್ರಮೇಯ ಮಂಡಿಸಲಾಯಿತು. A.I.S.F ಜಿಲ್ಲಾ ಕಾರ್ಯದರ್ಶಿ ಸೋಯಾ ಸಮಾವೇಶ ಉದ್ಘಾಟಿಸಿದರು. ಸಿಪಿಐ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಬಿ.ವಿ ರಾಜನ್, ಸಿಪಿಐ ಮಂಡಲ ಕಾರ್ಯದರ್ಶಿ ಜಯರಾಮ್ ಬಲ್ಲಂಗುಡೇಲ್, ಸಿಪಿಐ ಜಿಲ್ಲಾ ಸಮಿತಿ ಸದಸ್ಯರಾದ ರಾಮಕೃಷ್ಣ ಕಡಂಬಾರ್, AIYF ಜಿಲ್ಲಾ ಅಧ್ಯಕ್ಷ ಅಜಿತ್ ಎಂ.ಸಿ ಲಾಲ್ ಬಾಗ್, AIYF ಜಿಲ್ಲಾ ಉಪಾಧ್ಯಕ್ಷ ಹರೀಶ್ ಕೆ.ಆರ್, ಸಿಪಿಐ ಮಂಜೇಶ್ವರ ಲೋಕಲ್ ಕಾರ್ಯದರ್ಶಿ ಶ್ರೀಧರ ಆರ್.ಕೆ, AIYF ಮಂಡಲ ಅಧ್ಯಕ್ಷ ಶರತ್ ಬೆಜ್ಜ, ಕಾರ್ಯದರ್ಶಿ ದಯಾಕರ್ ಮಾಡ ಮೊದಲಾದವರು ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಬಳಿಕ ವಿದ್ಯಾರ್ಥಿ, ವಿದ್ಯಾರ್ಥಿನಿಗಳಿಂದ ಮನರಂಜನೆ ಕಾರ್ಯಕ್ರಮ ನಡೆಯಿತು. AISF ನೂತನ ಮಂಜೇಶ್ವರ ಮಂಡಲ ಸಮಿತಿ ಅಧ್ಯಕ್ಷರಾಗಿ ತನಿಷ್ ಕರಿಬೈಲ್ ಹಾಗೂ ಕಾರ್ಯದರ್ಶಿಯಾಗಿ ಲೇಖಾ ಕಾಜೂರ್ ಆಯ್ಕೆಯಾದರು. ಲೇಖಾ ಕಾಜೂರ್ ಸ್ವಾಗತಿಸಿ, ವಂದಿಸಿದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…