ಜನ ಮನದ ನಾಡಿ ಮಿಡಿತ

Advertisement

ಕೆ. ಎಲ್. ಕುಂಡಂತಾಯರಿಗೆ ಅನಂತಪ್ರಕಾಶ ಪುರಸ್ಕಾರ

ಕಿನ್ನಿಗೋಳಿ: ಪತ್ರಕರ್ತರಾಗಿ, ಬರಹಗಾರರಾಗಿ, ಜಾನಪದ ಸಂಶೋಧಕರಾಗಿ, ಯಕ್ಷಗಾನ ಕಲಾವಿದರಾಗಿ, ಸಾಹಿತ್ಯ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಕ್ರೀಯಾಶೀಲರಾಗಿ, ವಿಮರ್ಶಕರಾಗಿ ಹೆಸರು ಮಾಡಿರುವ
ಕೆ. ಎಲ್. ಕುಂಡಂತಾಯ ಅವರು ನಾಗಾರಧನೆ, ದೈವಾರಾಧನೆ, ಸಿರಿ ಆರಾಧನೆ ಅಲ್ಲದೆ ನೂರಾರು ದೇವಾಲಯಗಳ ಬಗ್ಗೆ ವಿಶೇಷ ಸಂಶೋಧನ ಬರಹಗಳನ್ನು ಪ್ರಕಟಿಸಿದವರು. ವಿರಾಟ್ ದರ್ಶನ, ಶ್ರೀ ದುರ್ಗಾದರ್ಶನ, ಕಟೀಲು ಶ್ರೀ ದುರ್ಗಾ ದರ್ಶನ, ಅಣಿ ಅರದಲ, ಭಾರ್ಗವರಾಮ, ಮೊದಲಾದ ಕೃತಿಗಳನ್ನು ಸಂಪಾದಿಸಿದವರು. ಯಕ್ಷಗಾನ, ಜಾನಪದ ಇವರ ಮೆಚ್ಚಿನ ಅಧ್ಯಯನ ಕ್ಷೇತ್ರ. ನಲವತ್ತಕ್ಕೂ ಹೆಚ್ಚು ಕೃತಿಗಳ ರಚಯಿತರು. ಇವರಿಗೆ ಈ ಬಾರಿಯ ಅನಂತ ಪ್ರಕಾಶ ಪುರಸ್ಕಾರವನ್ನು ನೀಡಿ ಗೌರವಿಸಲಾಗುವುದು. ಪುರಸ್ಕಾರವು ಕುಂಡಂತಾಯರ ಸಾಹಿತ್ಯ ಸಾಧನೆಗಳ ಕುರಿತಾದ ಪರಿಚಯ ಕೃತಿ ಹಾಗೂ ರೂ. ೧೦,೦೦೦ವನ್ನು ಒಳಗೊಂಡಿದ್ದು, ಸಪ್ಟಂಬರ್ ೧ರ ಭಾನುವಾರ ಕಿನ್ನಿಗೋಳಿ ನೇಕಾರ ಸೌಧದಲ್ಲಿ ನಡೆಯುವ ಸಮಾರಂಭದಲ್ಲಿ ಅನಂತಪ್ರಕಾಶ ಪತ್ರಿಕೆಯ ೨೯ನೇ ವರ್ಷಾಚರಣೆ ಸಂದರ್ಭದಲ್ಲಿ ನೀಡಲಾಗುವುದು ಎಂದು ಅನಂತ ಪ್ರಕಾಶ ಸಂಸ್ಥೆಯ ನಿರ್ದೇಶಕ ಕೊಡೆತ್ತೂರು ಸಚ್ಚಿದಾನಂದ ಉಡುಪ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!