ಜನ ಮನದ ನಾಡಿ ಮಿಡಿತ

Advertisement

ಕೆ. ಎಲ್. ಕುಂಡಂತಾಯರಿಗೆ ಅನಂತಪ್ರಕಾಶ ಪುರಸ್ಕಾರ

ಕಿನ್ನಿಗೋಳಿ: ಪತ್ರಕರ್ತರಾಗಿ, ಬರಹಗಾರರಾಗಿ, ಜಾನಪದ ಸಂಶೋಧಕರಾಗಿ, ಯಕ್ಷಗಾನ ಕಲಾವಿದರಾಗಿ, ಸಾಹಿತ್ಯ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಕ್ರೀಯಾಶೀಲರಾಗಿ, ವಿಮರ್ಶಕರಾಗಿ ಹೆಸರು ಮಾಡಿರುವ
ಕೆ. ಎಲ್. ಕುಂಡಂತಾಯ ಅವರು ನಾಗಾರಧನೆ, ದೈವಾರಾಧನೆ, ಸಿರಿ ಆರಾಧನೆ ಅಲ್ಲದೆ ನೂರಾರು ದೇವಾಲಯಗಳ ಬಗ್ಗೆ ವಿಶೇಷ ಸಂಶೋಧನ ಬರಹಗಳನ್ನು ಪ್ರಕಟಿಸಿದವರು. ವಿರಾಟ್ ದರ್ಶನ, ಶ್ರೀ ದುರ್ಗಾದರ್ಶನ, ಕಟೀಲು ಶ್ರೀ ದುರ್ಗಾ ದರ್ಶನ, ಅಣಿ ಅರದಲ, ಭಾರ್ಗವರಾಮ, ಮೊದಲಾದ ಕೃತಿಗಳನ್ನು ಸಂಪಾದಿಸಿದವರು. ಯಕ್ಷಗಾನ, ಜಾನಪದ ಇವರ ಮೆಚ್ಚಿನ ಅಧ್ಯಯನ ಕ್ಷೇತ್ರ. ನಲವತ್ತಕ್ಕೂ ಹೆಚ್ಚು ಕೃತಿಗಳ ರಚಯಿತರು. ಇವರಿಗೆ ಈ ಬಾರಿಯ ಅನಂತ ಪ್ರಕಾಶ ಪುರಸ್ಕಾರವನ್ನು ನೀಡಿ ಗೌರವಿಸಲಾಗುವುದು. ಪುರಸ್ಕಾರವು ಕುಂಡಂತಾಯರ ಸಾಹಿತ್ಯ ಸಾಧನೆಗಳ ಕುರಿತಾದ ಪರಿಚಯ ಕೃತಿ ಹಾಗೂ ರೂ. ೧೦,೦೦೦ವನ್ನು ಒಳಗೊಂಡಿದ್ದು, ಸಪ್ಟಂಬರ್ ೧ರ ಭಾನುವಾರ ಕಿನ್ನಿಗೋಳಿ ನೇಕಾರ ಸೌಧದಲ್ಲಿ ನಡೆಯುವ ಸಮಾರಂಭದಲ್ಲಿ ಅನಂತಪ್ರಕಾಶ ಪತ್ರಿಕೆಯ ೨೯ನೇ ವರ್ಷಾಚರಣೆ ಸಂದರ್ಭದಲ್ಲಿ ನೀಡಲಾಗುವುದು ಎಂದು ಅನಂತ ಪ್ರಕಾಶ ಸಂಸ್ಥೆಯ ನಿರ್ದೇಶಕ ಕೊಡೆತ್ತೂರು ಸಚ್ಚಿದಾನಂದ ಉಡುಪ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!