ಜನ ಮನದ ನಾಡಿ ಮಿಡಿತ

Advertisement

ಕೆ. ಎಲ್. ಕುಂಡಂತಾಯರಿಗೆ ಅನಂತಪ್ರಕಾಶ ಪುರಸ್ಕಾರ

ಕಿನ್ನಿಗೋಳಿ: ಪತ್ರಕರ್ತರಾಗಿ, ಬರಹಗಾರರಾಗಿ, ಜಾನಪದ ಸಂಶೋಧಕರಾಗಿ, ಯಕ್ಷಗಾನ ಕಲಾವಿದರಾಗಿ, ಸಾಹಿತ್ಯ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಕ್ರೀಯಾಶೀಲರಾಗಿ, ವಿಮರ್ಶಕರಾಗಿ ಹೆಸರು ಮಾಡಿರುವ
ಕೆ. ಎಲ್. ಕುಂಡಂತಾಯ ಅವರು ನಾಗಾರಧನೆ, ದೈವಾರಾಧನೆ, ಸಿರಿ ಆರಾಧನೆ ಅಲ್ಲದೆ ನೂರಾರು ದೇವಾಲಯಗಳ ಬಗ್ಗೆ ವಿಶೇಷ ಸಂಶೋಧನ ಬರಹಗಳನ್ನು ಪ್ರಕಟಿಸಿದವರು. ವಿರಾಟ್ ದರ್ಶನ, ಶ್ರೀ ದುರ್ಗಾದರ್ಶನ, ಕಟೀಲು ಶ್ರೀ ದುರ್ಗಾ ದರ್ಶನ, ಅಣಿ ಅರದಲ, ಭಾರ್ಗವರಾಮ, ಮೊದಲಾದ ಕೃತಿಗಳನ್ನು ಸಂಪಾದಿಸಿದವರು. ಯಕ್ಷಗಾನ, ಜಾನಪದ ಇವರ ಮೆಚ್ಚಿನ ಅಧ್ಯಯನ ಕ್ಷೇತ್ರ. ನಲವತ್ತಕ್ಕೂ ಹೆಚ್ಚು ಕೃತಿಗಳ ರಚಯಿತರು. ಇವರಿಗೆ ಈ ಬಾರಿಯ ಅನಂತ ಪ್ರಕಾಶ ಪುರಸ್ಕಾರವನ್ನು ನೀಡಿ ಗೌರವಿಸಲಾಗುವುದು. ಪುರಸ್ಕಾರವು ಕುಂಡಂತಾಯರ ಸಾಹಿತ್ಯ ಸಾಧನೆಗಳ ಕುರಿತಾದ ಪರಿಚಯ ಕೃತಿ ಹಾಗೂ ರೂ. ೧೦,೦೦೦ವನ್ನು ಒಳಗೊಂಡಿದ್ದು, ಸಪ್ಟಂಬರ್ ೧ರ ಭಾನುವಾರ ಕಿನ್ನಿಗೋಳಿ ನೇಕಾರ ಸೌಧದಲ್ಲಿ ನಡೆಯುವ ಸಮಾರಂಭದಲ್ಲಿ ಅನಂತಪ್ರಕಾಶ ಪತ್ರಿಕೆಯ ೨೯ನೇ ವರ್ಷಾಚರಣೆ ಸಂದರ್ಭದಲ್ಲಿ ನೀಡಲಾಗುವುದು ಎಂದು ಅನಂತ ಪ್ರಕಾಶ ಸಂಸ್ಥೆಯ ನಿರ್ದೇಶಕ ಕೊಡೆತ್ತೂರು ಸಚ್ಚಿದಾನಂದ ಉಡುಪ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!