ಕಿನ್ನಿಗೋಳಿ: ಪತ್ರಕರ್ತರಾಗಿ, ಬರಹಗಾರರಾಗಿ, ಜಾನಪದ ಸಂಶೋಧಕರಾಗಿ, ಯಕ್ಷಗಾನ ಕಲಾವಿದರಾಗಿ, ಸಾಹಿತ್ಯ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಕ್ರೀಯಾಶೀಲರಾಗಿ, ವಿಮರ್ಶಕರಾಗಿ ಹೆಸರು ಮಾಡಿರುವ
ಕೆ. ಎಲ್. ಕುಂಡಂತಾಯ ಅವರು ನಾಗಾರಧನೆ, ದೈವಾರಾಧನೆ, ಸಿರಿ ಆರಾಧನೆ ಅಲ್ಲದೆ ನೂರಾರು ದೇವಾಲಯಗಳ ಬಗ್ಗೆ ವಿಶೇಷ ಸಂಶೋಧನ ಬರಹಗಳನ್ನು ಪ್ರಕಟಿಸಿದವರು. ವಿರಾಟ್ ದರ್ಶನ, ಶ್ರೀ ದುರ್ಗಾದರ್ಶನ, ಕಟೀಲು ಶ್ರೀ ದುರ್ಗಾ ದರ್ಶನ, ಅಣಿ ಅರದಲ, ಭಾರ್ಗವರಾಮ, ಮೊದಲಾದ ಕೃತಿಗಳನ್ನು ಸಂಪಾದಿಸಿದವರು. ಯಕ್ಷಗಾನ, ಜಾನಪದ ಇವರ ಮೆಚ್ಚಿನ ಅಧ್ಯಯನ ಕ್ಷೇತ್ರ. ನಲವತ್ತಕ್ಕೂ ಹೆಚ್ಚು ಕೃತಿಗಳ ರಚಯಿತರು. ಇವರಿಗೆ ಈ ಬಾರಿಯ ಅನಂತ ಪ್ರಕಾಶ ಪುರಸ್ಕಾರವನ್ನು ನೀಡಿ ಗೌರವಿಸಲಾಗುವುದು. ಪುರಸ್ಕಾರವು ಕುಂಡಂತಾಯರ ಸಾಹಿತ್ಯ ಸಾಧನೆಗಳ ಕುರಿತಾದ ಪರಿಚಯ ಕೃತಿ ಹಾಗೂ ರೂ. ೧೦,೦೦೦ವನ್ನು ಒಳಗೊಂಡಿದ್ದು, ಸಪ್ಟಂಬರ್ ೧ರ ಭಾನುವಾರ ಕಿನ್ನಿಗೋಳಿ ನೇಕಾರ ಸೌಧದಲ್ಲಿ ನಡೆಯುವ ಸಮಾರಂಭದಲ್ಲಿ ಅನಂತಪ್ರಕಾಶ ಪತ್ರಿಕೆಯ ೨೯ನೇ ವರ್ಷಾಚರಣೆ ಸಂದರ್ಭದಲ್ಲಿ ನೀಡಲಾಗುವುದು ಎಂದು ಅನಂತ ಪ್ರಕಾಶ ಸಂಸ್ಥೆಯ ನಿರ್ದೇಶಕ ಕೊಡೆತ್ತೂರು ಸಚ್ಚಿದಾನಂದ ಉಡುಪ ತಿಳಿಸಿದ್ದಾರೆ.
ಬೀದಿ ನಾಯಿಗಳ ದಾಳಿಯಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ಪಟ್ಟಣದ ವಾರ್ಡ್…
ಮಳೆ ಬಂದಾಗಲೆಲ್ಲ ಕೃತಕ ನೆರೆ ಉಂಟಾಗಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತಿದ್ದ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ…
ಜಿಲ್ಲೆಯ ಯಲಬುರ್ಗಾ, ಕುಷ್ಟಗಿ ಹಾಗೂ ಕೊಪ್ಪಳ ತಾಲೂಕಿನ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರು ಗಂಭೀರ…
ಸಾಮಾನ್ಯವಾಗಿ 18ನೇ ವಯಸ್ಸಿನಲ್ಲಿ ಯುವಕರು ಕಾಲೇಜು ಶಿಕ್ಷಣವನ್ನು ಆರಂಭಿಸುತ್ತಾರೆ. ಆದರೆ ಅಮೆರಿಕದ ಫ್ಲೋರಿಡಾ ಮೂಲದ ನಾಥನ್ ಥಾಮಸ್ ಇದೇ ವಯಸ್ಸಿನಲ್ಲಿ…
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…