ಕಿನ್ನಿಗೋಳಿ: ಪತ್ರಕರ್ತರಾಗಿ, ಬರಹಗಾರರಾಗಿ, ಜಾನಪದ ಸಂಶೋಧಕರಾಗಿ, ಯಕ್ಷಗಾನ ಕಲಾವಿದರಾಗಿ, ಸಾಹಿತ್ಯ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಕ್ರೀಯಾಶೀಲರಾಗಿ, ವಿಮರ್ಶಕರಾಗಿ ಹೆಸರು ಮಾಡಿರುವ
ಕೆ. ಎಲ್. ಕುಂಡಂತಾಯ ಅವರು ನಾಗಾರಧನೆ, ದೈವಾರಾಧನೆ, ಸಿರಿ ಆರಾಧನೆ ಅಲ್ಲದೆ ನೂರಾರು ದೇವಾಲಯಗಳ ಬಗ್ಗೆ ವಿಶೇಷ ಸಂಶೋಧನ ಬರಹಗಳನ್ನು ಪ್ರಕಟಿಸಿದವರು. ವಿರಾಟ್ ದರ್ಶನ, ಶ್ರೀ ದುರ್ಗಾದರ್ಶನ, ಕಟೀಲು ಶ್ರೀ ದುರ್ಗಾ ದರ್ಶನ, ಅಣಿ ಅರದಲ, ಭಾರ್ಗವರಾಮ, ಮೊದಲಾದ ಕೃತಿಗಳನ್ನು ಸಂಪಾದಿಸಿದವರು. ಯಕ್ಷಗಾನ, ಜಾನಪದ ಇವರ ಮೆಚ್ಚಿನ ಅಧ್ಯಯನ ಕ್ಷೇತ್ರ. ನಲವತ್ತಕ್ಕೂ ಹೆಚ್ಚು ಕೃತಿಗಳ ರಚಯಿತರು. ಇವರಿಗೆ ಈ ಬಾರಿಯ ಅನಂತ ಪ್ರಕಾಶ ಪುರಸ್ಕಾರವನ್ನು ನೀಡಿ ಗೌರವಿಸಲಾಗುವುದು. ಪುರಸ್ಕಾರವು ಕುಂಡಂತಾಯರ ಸಾಹಿತ್ಯ ಸಾಧನೆಗಳ ಕುರಿತಾದ ಪರಿಚಯ ಕೃತಿ ಹಾಗೂ ರೂ. ೧೦,೦೦೦ವನ್ನು ಒಳಗೊಂಡಿದ್ದು, ಸಪ್ಟಂಬರ್ ೧ರ ಭಾನುವಾರ ಕಿನ್ನಿಗೋಳಿ ನೇಕಾರ ಸೌಧದಲ್ಲಿ ನಡೆಯುವ ಸಮಾರಂಭದಲ್ಲಿ ಅನಂತಪ್ರಕಾಶ ಪತ್ರಿಕೆಯ ೨೯ನೇ ವರ್ಷಾಚರಣೆ ಸಂದರ್ಭದಲ್ಲಿ ನೀಡಲಾಗುವುದು ಎಂದು ಅನಂತ ಪ್ರಕಾಶ ಸಂಸ್ಥೆಯ ನಿರ್ದೇಶಕ ಕೊಡೆತ್ತೂರು ಸಚ್ಚಿದಾನಂದ ಉಡುಪ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…