ಮುಲ್ಕಿ: ಸೀಮೆಯ ಒಂಬತ್ತು ಮಾಗಣೆಯ ಮಾನಂಪಾಡಿ ಶ್ರೀ ವೀರಭದ್ರ ಮಹಾಮ್ಮಾಯಿ ದೇವಸ್ಥಾನದಲ್ಲಿ ಶ್ರೀ ವೀರಭದ್ರ ದೇವರ ಸನ್ನಿಧಿಯಲ್ಲಿ ಕ್ಷೇತ್ರದ ತಂತ್ರಿಗಳಾದ ಶಿಬರೂರು ವೇದವ್ಯಾಸ ತಂತ್ರಿಗಳ ಮಾರ್ಗದರ್ಶನದಲ್ಲಿ ಮಧುಸೂದನ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದೇವರಿಗೆ ಶತರುದ್ರಾಭಿಷೇಕ ಹಾಗೂ ಶ್ರೀ ಚಕ್ರರಾಧನೆ ಪೂಜೆ ವಿಜೃಂಭಣೆಯಿಂದ ನಡೆಯಿತು.

ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಬೆಳಿಗ್ಗೆ ವಿಶೇಷ ಪ್ರಾರ್ಥನೆ, ಶ್ರೀ ಮಹಾಗಣಪತಿ ದೇವರಿಗೆ ಗಣ ಹೋಮ, ಶ್ರೀ ವೀರಭದ್ರ ದೇವರಿಗೆ ಶತರುದ್ರಾಭಿಷೇಕ, ಶ್ರೀ ಮಹಾಮ್ಮಾಯಿ ದೇವರಿಗೆ ಹೂವಿನ ಪೂಜೆ, ಶ್ರೀ ನಾಗದೇವರ ಸಾನ್ವಿಧ್ಯದಲ್ಲಿ ಆಶ್ಲೇಷಾ ಬಲಿ ಪೂಜೆ, ಶ್ರೀ ಧೂಮಾವತಿ ಸಾನಿಧ್ಯದಲ್ಲಿ ಪನಿಯಾರಸೇವೆ, ರಾತ್ರಿ ಶ್ರೀ ಚಕ್ರರಾಧನೆ ಪೂಜೆ, ಶ್ರೀ ದೇವರಿಗೆ ರಂಗ ಪೂಜೆ, ಪ್ರಸಾದ ವಿತರಣೆ ,ಅನ್ನ ಸಂತರ್ಪಣೆ ನಡೆಯಿತು
ಈ ಸಂದರ್ಭ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು, ಪಟೇಲ್ ವಿಶ್ವನಾಥ ರಾವ್, ಗೋಪಿನಾಥರಾವ್, ಸೇವಾದಾರರಾದ ಆಶಾ ಮತ್ತು ಪುರಂದರ ಡಿ ಶೆಟ್ಟಿಗಾರ್, ಆಡಳಿತ ಮೊಕ್ತೇಸರರು, ನಾಲ್ಕುಮಾಗಣೆಯ ಗುರಿಕಾರರು ಮತ್ತಿತರರು ಉಪಸ್ಥಿತರಿದ್ದರು



