ದೈಹಿಕ ಹಾಗು ಸ್ವಂತ ಸಾಮರ್ಥ್ಯದಿಂದ ಕ್ರೀಡೆಯಲ್ಲಿ ಸಾಧನೆ ಮಾಡಬಹುದು ಎಂದು ರಾಷ್ಟ್ರೀಯ ಕ್ರೀಡಾಪಟು ಪುಂಡಲೀಕ ಹೊಸಬೆಟ್ಟು ಹೇಳಿದ್ದಾರೆ.
ಇವರು ಸಂಡೇ ಗಾಯ್ಸ್ ಸಂಸ್ಥೆಯು ಸುರತ್ಕಲ್ ವಿಧ್ಯಾದಾಯಿನಿ ಪ್ರೌಢ ಶಾಲೆಯ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ ನಿಗದಿತ ಓವರ್ಗಳ ಲೀಗ್ ಕ್ರಿಕೆಟ್ ಪಂದ್ಯಾಟದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಪುಂಡಲೀಕ ಹೊಸಬೆಟ್ಟು ರವರು ಕ್ರಿಕೆಟ್ ಸಾಧನೆ ಮಾಡಲು ನುರಿತ ತರಬೇತುದಾರರ ಸಹಕಾರದಿಂದ ಕ್ರಿಕೆಟ್ ಪಟುಗಳು ತರಬೇತಿ ಪಡೆದು, ರಾಜ್ಯ, ರಾಷ್ಟ್ರ, ಮಟ್ಟದಲ್ಲಿ ಮಿಂಚಬಹುದು, ಎಂದು ಯುವ ಆಟಗಾರರಿಗೆ ಸ್ಪೂರ್ತಿದಾಯಕ ಮಾತುಗಳನ್ನು ಹೇಳಿದರು.
ಇದೇ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಸತ್ಯಜಿತ್ ಸುರತ್ಕಲ್, ವಿನಯ್ ಆಚಾರ್ಯ ಹೊಸಬೆಟ್ಟು, ಮಹಾಬಲ ಪೂಜಾರಿ ಕಡ0ಬೋಡಿ, ಪ್ರತಿಭಾ ಕುಳಾಯಿ, ಲೋಕೇಶ್ ಕೋಡಿಕೆರೆ, ಸಂಡೇ ಗಯ್ಸ್ ತಂಡದ ಅಧ್ಯಕ್ಷ ಲಲಿತ್ ಪ್ರಸಾದ್, ಉಮೇಶ್ ಕೋಡಿಕಲ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕ್ರೀಡೆಯಲ್ಲಿ ಸಾಧನೆ ಮಾಡಿದ ಅಂತಾರಾಷ್ಟ್ರೀಯ ಕ್ರೀಡಾಪಟು ವಿಜಯಕಾಂಚನ್ ಹೊಸಬೆಟ್ಟು, ರಾಷ್ಟ್ರೀಯ ಕ್ರೀಡಾಪಟು ಪುಂಡಲೀಕ ಹೊಸಬೆಟ್ಟು, ಕ್ಯಾಪ್ಟನ್ ಲಿಲಾಧರ್ ಕಡ0ಬೋಡಿ, ಜಾಗ್ವಾರ್ ತಂಡದ ಶರತ್ ಮಂಗಳಪೇಟೆ, ಸೌರವ್ ಗುಡ್ಡೆಕೊಪ್ಪಳ, ದಯಾನಂದ ಕೋಡಿಕಲ್, ಸುರೇಂದ್ರ ಕಡ0ಬೋಡಿ, ಅವರನ್ನು ಗೌರವಿಸಲಾಯಿತು. ಸ್ಟ್ರೈಕರ್ ಸುರತ್ಕಲ್ ತಂಡ ಪ್ರಥಮ ಬಹುಮಾನ ಪಡೆದರೆ, ಕರಾವಳಿ ಕಿಂಗ್ಸ್ ಅಗ್ಗದಕಳಿಯ ದ್ವಿತೀಯ ಬಹುಮಾನ ಪಡೆದುಕೊಂಡಿತು. ಕಾರ್ಯಕ್ರಮ ನಿರೂಪಣೆಯನ್ನು ವಿನಯ್ ಉದ್ಯಾವರ ನಿರ್ವಹಿಸಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…