ದೈಹಿಕ ಹಾಗು ಸ್ವಂತ ಸಾಮರ್ಥ್ಯದಿಂದ ಕ್ರೀಡೆಯಲ್ಲಿ ಸಾಧನೆ ಮಾಡಬಹುದು ಎಂದು ರಾಷ್ಟ್ರೀಯ ಕ್ರೀಡಾಪಟು ಪುಂಡಲೀಕ ಹೊಸಬೆಟ್ಟು ಹೇಳಿದ್ದಾರೆ.
ಇವರು ಸಂಡೇ ಗಾಯ್ಸ್ ಸಂಸ್ಥೆಯು ಸುರತ್ಕಲ್ ವಿಧ್ಯಾದಾಯಿನಿ ಪ್ರೌಢ ಶಾಲೆಯ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ ನಿಗದಿತ ಓವರ್ಗಳ ಲೀಗ್ ಕ್ರಿಕೆಟ್ ಪಂದ್ಯಾಟದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಪುಂಡಲೀಕ ಹೊಸಬೆಟ್ಟು ರವರು ಕ್ರಿಕೆಟ್ ಸಾಧನೆ ಮಾಡಲು ನುರಿತ ತರಬೇತುದಾರರ ಸಹಕಾರದಿಂದ ಕ್ರಿಕೆಟ್ ಪಟುಗಳು ತರಬೇತಿ ಪಡೆದು, ರಾಜ್ಯ, ರಾಷ್ಟ್ರ, ಮಟ್ಟದಲ್ಲಿ ಮಿಂಚಬಹುದು, ಎಂದು ಯುವ ಆಟಗಾರರಿಗೆ ಸ್ಪೂರ್ತಿದಾಯಕ ಮಾತುಗಳನ್ನು ಹೇಳಿದರು.
ಇದೇ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಸತ್ಯಜಿತ್ ಸುರತ್ಕಲ್, ವಿನಯ್ ಆಚಾರ್ಯ ಹೊಸಬೆಟ್ಟು, ಮಹಾಬಲ ಪೂಜಾರಿ ಕಡ0ಬೋಡಿ, ಪ್ರತಿಭಾ ಕುಳಾಯಿ, ಲೋಕೇಶ್ ಕೋಡಿಕೆರೆ, ಸಂಡೇ ಗಯ್ಸ್ ತಂಡದ ಅಧ್ಯಕ್ಷ ಲಲಿತ್ ಪ್ರಸಾದ್, ಉಮೇಶ್ ಕೋಡಿಕಲ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕ್ರೀಡೆಯಲ್ಲಿ ಸಾಧನೆ ಮಾಡಿದ ಅಂತಾರಾಷ್ಟ್ರೀಯ ಕ್ರೀಡಾಪಟು ವಿಜಯಕಾಂಚನ್ ಹೊಸಬೆಟ್ಟು, ರಾಷ್ಟ್ರೀಯ ಕ್ರೀಡಾಪಟು ಪುಂಡಲೀಕ ಹೊಸಬೆಟ್ಟು, ಕ್ಯಾಪ್ಟನ್ ಲಿಲಾಧರ್ ಕಡ0ಬೋಡಿ, ಜಾಗ್ವಾರ್ ತಂಡದ ಶರತ್ ಮಂಗಳಪೇಟೆ, ಸೌರವ್ ಗುಡ್ಡೆಕೊಪ್ಪಳ, ದಯಾನಂದ ಕೋಡಿಕಲ್, ಸುರೇಂದ್ರ ಕಡ0ಬೋಡಿ, ಅವರನ್ನು ಗೌರವಿಸಲಾಯಿತು. ಸ್ಟ್ರೈಕರ್ ಸುರತ್ಕಲ್ ತಂಡ ಪ್ರಥಮ ಬಹುಮಾನ ಪಡೆದರೆ, ಕರಾವಳಿ ಕಿಂಗ್ಸ್ ಅಗ್ಗದಕಳಿಯ ದ್ವಿತೀಯ ಬಹುಮಾನ ಪಡೆದುಕೊಂಡಿತು. ಕಾರ್ಯಕ್ರಮ ನಿರೂಪಣೆಯನ್ನು ವಿನಯ್ ಉದ್ಯಾವರ ನಿರ್ವಹಿಸಿದರು.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…