ದೈಹಿಕ ಹಾಗು ಸ್ವಂತ ಸಾಮರ್ಥ್ಯದಿಂದ ಕ್ರೀಡೆಯಲ್ಲಿ ಸಾಧನೆ ಮಾಡಬಹುದು ಎಂದು ರಾಷ್ಟ್ರೀಯ ಕ್ರೀಡಾಪಟು ಪುಂಡಲೀಕ ಹೊಸಬೆಟ್ಟು ಹೇಳಿದ್ದಾರೆ.
ಇವರು ಸಂಡೇ ಗಾಯ್ಸ್ ಸಂಸ್ಥೆಯು ಸುರತ್ಕಲ್ ವಿಧ್ಯಾದಾಯಿನಿ ಪ್ರೌಢ ಶಾಲೆಯ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ ನಿಗದಿತ ಓವರ್ಗಳ ಲೀಗ್ ಕ್ರಿಕೆಟ್ ಪಂದ್ಯಾಟದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಪುಂಡಲೀಕ ಹೊಸಬೆಟ್ಟು ರವರು ಕ್ರಿಕೆಟ್ ಸಾಧನೆ ಮಾಡಲು ನುರಿತ ತರಬೇತುದಾರರ ಸಹಕಾರದಿಂದ ಕ್ರಿಕೆಟ್ ಪಟುಗಳು ತರಬೇತಿ ಪಡೆದು, ರಾಜ್ಯ, ರಾಷ್ಟ್ರ, ಮಟ್ಟದಲ್ಲಿ ಮಿಂಚಬಹುದು, ಎಂದು ಯುವ ಆಟಗಾರರಿಗೆ ಸ್ಪೂರ್ತಿದಾಯಕ ಮಾತುಗಳನ್ನು ಹೇಳಿದರು.
ಇದೇ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಸತ್ಯಜಿತ್ ಸುರತ್ಕಲ್, ವಿನಯ್ ಆಚಾರ್ಯ ಹೊಸಬೆಟ್ಟು, ಮಹಾಬಲ ಪೂಜಾರಿ ಕಡ0ಬೋಡಿ, ಪ್ರತಿಭಾ ಕುಳಾಯಿ, ಲೋಕೇಶ್ ಕೋಡಿಕೆರೆ, ಸಂಡೇ ಗಯ್ಸ್ ತಂಡದ ಅಧ್ಯಕ್ಷ ಲಲಿತ್ ಪ್ರಸಾದ್, ಉಮೇಶ್ ಕೋಡಿಕಲ್ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕ್ರೀಡೆಯಲ್ಲಿ ಸಾಧನೆ ಮಾಡಿದ ಅಂತಾರಾಷ್ಟ್ರೀಯ ಕ್ರೀಡಾಪಟು ವಿಜಯಕಾಂಚನ್ ಹೊಸಬೆಟ್ಟು, ರಾಷ್ಟ್ರೀಯ ಕ್ರೀಡಾಪಟು ಪುಂಡಲೀಕ ಹೊಸಬೆಟ್ಟು, ಕ್ಯಾಪ್ಟನ್ ಲಿಲಾಧರ್ ಕಡ0ಬೋಡಿ, ಜಾಗ್ವಾರ್ ತಂಡದ ಶರತ್ ಮಂಗಳಪೇಟೆ, ಸೌರವ್ ಗುಡ್ಡೆಕೊಪ್ಪಳ, ದಯಾನಂದ ಕೋಡಿಕಲ್, ಸುರೇಂದ್ರ ಕಡ0ಬೋಡಿ, ಅವರನ್ನು ಗೌರವಿಸಲಾಯಿತು. ಸ್ಟ್ರೈಕರ್ ಸುರತ್ಕಲ್ ತಂಡ ಪ್ರಥಮ ಬಹುಮಾನ ಪಡೆದರೆ, ಕರಾವಳಿ ಕಿಂಗ್ಸ್ ಅಗ್ಗದಕಳಿಯ ದ್ವಿತೀಯ ಬಹುಮಾನ ಪಡೆದುಕೊಂಡಿತು. ಕಾರ್ಯಕ್ರಮ ನಿರೂಪಣೆಯನ್ನು ವಿನಯ್ ಉದ್ಯಾವರ ನಿರ್ವಹಿಸಿದರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…