ಮುಲ್ಕಿ : ಭಾರತೀಯ ಜನತಾ ಪಾರ್ಟಿ ಮುಲ್ಕಿ ಮೂಡುಬಿದ್ರಿ ಮಂಡಲದ ಮಹಿಳಾ ಮೋರ್ಚಾ ವತಿಯಿಂದ ಮುಲ್ಕಿ ಪೊಲೀಸ್ ಠಾಣೆ ಹಾಗು ಮುಲ್ಕಿ ಅರೋಗ್ಯ ಕೇಂದ್ರದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ ನಡೆಯಿತು. ಆರಕ್ಷಕ ಠಾಣೆ ಅಧಿಕಾರಿಗಳಿಗೆ ಹಾಗು ಸಿಬಂದಿಗಳಿಗೆ ಮತ್ತು ಆರೋಗ್ಯ ಕೇಂದ್ರದ ಡಾಕ್ಟರ್ ರವರು ಹಾಗು ಸಿಬಂದಿಗಳಿಗೆ ರಕ್ಷೆ ಕಟ್ಟಿ ಸಿಹಿ ಹಂಚಲಾಯಿತು. ಮಹಿಳಾ ಮೋರ್ಚದ ಸದಸ್ಯರನ್ನು, ಆರಕ್ಷಕ ಠಾಣೆ ಮತ್ತು ಆರೋಗ್ಯಕೇಂದ್ರದ ಅಧಿಕಾರಿಗಳು ಆದರಪೂರ್ವಕವಾಗಿ ಸ್ವಾಗತಿಸಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಎಲ್ಲ ರೀತಿಯ ಸಹಕಾರವನ್ನು ನೀಡಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮೋರ್ಛದ ಅಧ್ಯಕ್ಷರಾದ ಶ್ರೀಮತಿ ಗೀತಾ ಲಕ್ಷ್ಮಿ ಜಿಲ್ಲಾ ಒಬಿಸಿ ಮೋರ್ಚಾದ ವಿನೋದ್ ಎಸ್ ಸಾಲ್ಯಾನ್ ಬೆಳ್ಳಾಯರು, ಬಳ್ಕುಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಮತಾ ಡಿ ಪೂಂಜಾ, ಐಕಳ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಲಕ್ಷ್ಮಿ ,ಹಿರಿಯರಾದ ಬೇಬಿ ಕೆಮ್ಮಡೆ , ಮೆನ್ನಬೆಟ್ಟು ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರಾದ ಸರೋಜ ಗುಜರನ್ , ಕಿನ್ನಿಗೋಳಿ ಗ್ರಾಮ ಪಂಚಾಯತ್ನ ಮಾಜಿ ಸದಸ್ಯರಾದ ಹೇಮಲತಾ, ಕಿನ್ನಿಗೋಳಿ ಮಹಿಳಾ ಮೋರ್ಚಾದ ಸದಸ್ಯರಾದ ಶೋಭಾ ರಾವ್, ಸವಿತಾ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಆಶಾ ರತ್ನಾಕರ ಸುವರ್ಣ, ಜಯಲಕ್ಷ್ಮಿ ಪೂಜಾರಿ ಮುಲ್ಕಿ ನಗರ ಪಂಚಾಯತ್ ಸದಸ್ಯರಾದ ರಾಧಿಕ ಕೋಟ್ಯಾನ್, ದಯಾವತಿ, ಮುಲ್ಕಿ ಮಹಿಳಾ ಮೋರ್ಚಾದ ಸಂಚಾಲಕಿ ರೇಷ್ಮಾ ಬೇಕಲ್ , ಸದಸ್ಯರಾದ ಭಾರತಿ ರೈ , ಮಲ್ಲಿಕಾ , ಸುಮಿತ್ರ , ಸುನಿತಾ ಶೆಟ್ಟಿ ಮಹಿಳಾ ಮೋರ್ಚಾದ ಸದಸ್ಯರು ಪಾಲ್ಗೊಂಡಿದ್ದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…