ಮುಲ್ಕಿ : ಭಾರತೀಯ ಜನತಾ ಪಾರ್ಟಿ ಮುಲ್ಕಿ ಮೂಡುಬಿದ್ರಿ ಮಂಡಲದ ಮಹಿಳಾ ಮೋರ್ಚಾ ವತಿಯಿಂದ ಮುಲ್ಕಿ ಪೊಲೀಸ್ ಠಾಣೆ ಹಾಗು ಮುಲ್ಕಿ ಅರೋಗ್ಯ ಕೇಂದ್ರದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ ನಡೆಯಿತು. ಆರಕ್ಷಕ ಠಾಣೆ ಅಧಿಕಾರಿಗಳಿಗೆ ಹಾಗು ಸಿಬಂದಿಗಳಿಗೆ ಮತ್ತು ಆರೋಗ್ಯ ಕೇಂದ್ರದ ಡಾಕ್ಟರ್ ರವರು ಹಾಗು ಸಿಬಂದಿಗಳಿಗೆ ರಕ್ಷೆ ಕಟ್ಟಿ ಸಿಹಿ ಹಂಚಲಾಯಿತು. ಮಹಿಳಾ ಮೋರ್ಚದ ಸದಸ್ಯರನ್ನು, ಆರಕ್ಷಕ ಠಾಣೆ ಮತ್ತು ಆರೋಗ್ಯಕೇಂದ್ರದ ಅಧಿಕಾರಿಗಳು ಆದರಪೂರ್ವಕವಾಗಿ ಸ್ವಾಗತಿಸಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಎಲ್ಲ ರೀತಿಯ ಸಹಕಾರವನ್ನು ನೀಡಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮೋರ್ಛದ ಅಧ್ಯಕ್ಷರಾದ ಶ್ರೀಮತಿ ಗೀತಾ ಲಕ್ಷ್ಮಿ ಜಿಲ್ಲಾ ಒಬಿಸಿ ಮೋರ್ಚಾದ ವಿನೋದ್ ಎಸ್ ಸಾಲ್ಯಾನ್ ಬೆಳ್ಳಾಯರು, ಬಳ್ಕುಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಮತಾ ಡಿ ಪೂಂಜಾ, ಐಕಳ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಲಕ್ಷ್ಮಿ ,ಹಿರಿಯರಾದ ಬೇಬಿ ಕೆಮ್ಮಡೆ , ಮೆನ್ನಬೆಟ್ಟು ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರಾದ ಸರೋಜ ಗುಜರನ್ , ಕಿನ್ನಿಗೋಳಿ ಗ್ರಾಮ ಪಂಚಾಯತ್ನ ಮಾಜಿ ಸದಸ್ಯರಾದ ಹೇಮಲತಾ, ಕಿನ್ನಿಗೋಳಿ ಮಹಿಳಾ ಮೋರ್ಚಾದ ಸದಸ್ಯರಾದ ಶೋಭಾ ರಾವ್, ಸವಿತಾ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಆಶಾ ರತ್ನಾಕರ ಸುವರ್ಣ, ಜಯಲಕ್ಷ್ಮಿ ಪೂಜಾರಿ ಮುಲ್ಕಿ ನಗರ ಪಂಚಾಯತ್ ಸದಸ್ಯರಾದ ರಾಧಿಕ ಕೋಟ್ಯಾನ್, ದಯಾವತಿ, ಮುಲ್ಕಿ ಮಹಿಳಾ ಮೋರ್ಚಾದ ಸಂಚಾಲಕಿ ರೇಷ್ಮಾ ಬೇಕಲ್ , ಸದಸ್ಯರಾದ ಭಾರತಿ ರೈ , ಮಲ್ಲಿಕಾ , ಸುಮಿತ್ರ , ಸುನಿತಾ ಶೆಟ್ಟಿ ಮಹಿಳಾ ಮೋರ್ಚಾದ ಸದಸ್ಯರು ಪಾಲ್ಗೊಂಡಿದ್ದರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…