ಮುಲ್ಕಿ : ಭಾರತೀಯ ಜನತಾ ಪಾರ್ಟಿ ಮುಲ್ಕಿ ಮೂಡುಬಿದ್ರಿ ಮಂಡಲದ ಮಹಿಳಾ ಮೋರ್ಚಾ ವತಿಯಿಂದ ಮುಲ್ಕಿ ಪೊಲೀಸ್ ಠಾಣೆ ಹಾಗು ಮುಲ್ಕಿ ಅರೋಗ್ಯ ಕೇಂದ್ರದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ ನಡೆಯಿತು. ಆರಕ್ಷಕ ಠಾಣೆ ಅಧಿಕಾರಿಗಳಿಗೆ ಹಾಗು ಸಿಬಂದಿಗಳಿಗೆ ಮತ್ತು ಆರೋಗ್ಯ ಕೇಂದ್ರದ ಡಾಕ್ಟರ್ ರವರು ಹಾಗು ಸಿಬಂದಿಗಳಿಗೆ ರಕ್ಷೆ ಕಟ್ಟಿ ಸಿಹಿ ಹಂಚಲಾಯಿತು. ಮಹಿಳಾ ಮೋರ್ಚದ ಸದಸ್ಯರನ್ನು, ಆರಕ್ಷಕ ಠಾಣೆ ಮತ್ತು ಆರೋಗ್ಯಕೇಂದ್ರದ ಅಧಿಕಾರಿಗಳು ಆದರಪೂರ್ವಕವಾಗಿ ಸ್ವಾಗತಿಸಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಎಲ್ಲ ರೀತಿಯ ಸಹಕಾರವನ್ನು ನೀಡಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮೋರ್ಛದ ಅಧ್ಯಕ್ಷರಾದ ಶ್ರೀಮತಿ ಗೀತಾ ಲಕ್ಷ್ಮಿ ಜಿಲ್ಲಾ ಒಬಿಸಿ ಮೋರ್ಚಾದ ವಿನೋದ್ ಎಸ್ ಸಾಲ್ಯಾನ್ ಬೆಳ್ಳಾಯರು, ಬಳ್ಕುಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಮತಾ ಡಿ ಪೂಂಜಾ, ಐಕಳ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಲಕ್ಷ್ಮಿ ,ಹಿರಿಯರಾದ ಬೇಬಿ ಕೆಮ್ಮಡೆ , ಮೆನ್ನಬೆಟ್ಟು ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರಾದ ಸರೋಜ ಗುಜರನ್ , ಕಿನ್ನಿಗೋಳಿ ಗ್ರಾಮ ಪಂಚಾಯತ್ನ ಮಾಜಿ ಸದಸ್ಯರಾದ ಹೇಮಲತಾ, ಕಿನ್ನಿಗೋಳಿ ಮಹಿಳಾ ಮೋರ್ಚಾದ ಸದಸ್ಯರಾದ ಶೋಭಾ ರಾವ್, ಸವಿತಾ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಆಶಾ ರತ್ನಾಕರ ಸುವರ್ಣ, ಜಯಲಕ್ಷ್ಮಿ ಪೂಜಾರಿ ಮುಲ್ಕಿ ನಗರ ಪಂಚಾಯತ್ ಸದಸ್ಯರಾದ ರಾಧಿಕ ಕೋಟ್ಯಾನ್, ದಯಾವತಿ, ಮುಲ್ಕಿ ಮಹಿಳಾ ಮೋರ್ಚಾದ ಸಂಚಾಲಕಿ ರೇಷ್ಮಾ ಬೇಕಲ್ , ಸದಸ್ಯರಾದ ಭಾರತಿ ರೈ , ಮಲ್ಲಿಕಾ , ಸುಮಿತ್ರ , ಸುನಿತಾ ಶೆಟ್ಟಿ ಮಹಿಳಾ ಮೋರ್ಚಾದ ಸದಸ್ಯರು ಪಾಲ್ಗೊಂಡಿದ್ದರು.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…