ಸವಣೂರು: ಬಸ್ ನಿಲ್ಲಿಸಿಲ್ಲವೆಂದು ಬಸ್ ಚಾಲಕನಿಗೆ ಕೆಎಸ್ಆರ್ ಟಿಸಿ ಸಿಬ್ಬಂದಿಯಿಂದಲೇ ಬಸ್ ಚಾಲಕನಿಗೆ ಹಲ್ಲೆ ನಡೆಸಿದ ಘಟನೆ ಕಡಬ ತಾಲೂಕಿನ ಸವಣೂರಿನಲ್ಲಿ ನಡೆದಿದೆ.
ಸವಣೂರು ಪೆಟ್ರೋಲ್ ಪಂಪ್ ಬಳಿಯಿರುವ ಬಸ್ ನಿಲ್ದಾಣದಲ್ಲಿ ನಿಂತಿದ್ದ ಕೆಎಸ್ ಆರ್ ಟಿಸಿ ಸಿಬ್ಬಂದಿಯೋರ್ವರು ಬಸ್ ನಿಲ್ದಾಣದ ಸಮೀಪವೇ ಬಸ್ಸು ನಿಲ್ಲಿಸಿಲ್ಲವೆಂದು ಆರೋಪಿಸಿ ಚಾಲಕ ಭರತ್ ಎಂಬವರಿಗೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಬಸ್ ಕೆಲವು ಮೀಟರ್ ದೂರದಲ್ಲಿ ನಿಲ್ಲಿಸಿದಾಗ ಬಸ್ ಗೆ ಹತ್ತಿದ ಸಿಬ್ಬಂದಿ ನಾರಾಯಣ ಅವರು ಚಾಲಕನಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಕೂಡಲೇ ಚಾಲಕ ಬಸ್ ನಿಲ್ಲಿಸಿ ಬಸ್ ನಿಂದ ಇಳಿದಿದ್ದಾರೆ.ಬಸ್ ನಲ್ಲಿದ್ದ ಸಹಪ್ರಯಾಣಿಕರು ಘಟನೆಯ ವಿಡಿಯೋ ಚಿತ್ರೀಕರಣ ಮಾಡಿದ್ದು, ನಾರಾಯಣ ಅವರು ಚಾಲಕನನ್ನು ಪ್ರಶ್ನಿಸುವುದು, ಪೊಲೀಸರಿಗೆ ದೂರು ನೀಡಲು ಮುಂದಾದ ಚಾಲಕ ದಾಖಲಾದ ಅಸ್ಪತ್ರೆಗೆ ಹಲ್ಲೆ ನಡೆಸಿದ ಎನ್ನಲಾದ ಸಿಬ್ಬಂದಿ ಹಾಗೂ ಇನ್ನೋರ್ವ ಸಿಬ್ಬಂದಿ ಮಾತುಕತೆ ನಡೆಸುವುದು, ಇದಕ್ಕೆ ಚಾಲಕನ ಸಂಬಂಧಿಕರು ಆಕ್ಷೇಪ ವ್ಯಕ್ತಪಡಿಸುತ್ತಿರುವ ಬಗ್ಗೆ ವಿಡಿಯೋದಲ್ಲಿ ರೆಕಾರ್ಡ್ ಆಗಿದೆ.ಹಲ್ಲೆಗೊಳಗಾದ ಚಾಲಕ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಬಸ್ ಚಾಲಕ ಬೆಳ್ಳಾರೆ ಪೊಲೀಸರಿಗೆ ದೂರು ನೀಡಿದ್ದು, ತನಿಖೆ ಮುಂದುವರಿಸಿದ್ದಾರೆ. ಹಲ್ಲೆ ಖಂಡಿಸಿ ಬಸ್ ಸಂಚಾರ ಸ್ಥಗಿತಗೊಳಿಸಿ ಪ್ರತಿಭಟನೆ ಮಾಡಲು ಸಿಬ್ಬಂದಿಗಳು ನಿರ್ಧರಿಸಿದ್ದಾರೆ. ಬಳಿಕದ ಬೆಳವಣಿಗೆಯಲ್ಲಿ ಹಲ್ಲೆ ನಡೆಸಿದವರ ಮೇಲೆ ಅಧಿಕಾರಿಗಳು ಕ್ರಮ ಕೈಗೊಳ್ಳುವ ಭರವಸೆ ನೀಡಿದ ನಂತರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…