ಮೈಸೂರು: ವರದಿಗಳ ಪ್ರಕಾರ, ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ರವಿವಾರ ನಡೆದ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಬಿಜೆಪಿ ಕಾರ್ಪೋರೇಟರ್ ಸಹೋದರ ತುಪ್ಪೆ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ನಗರದ ದಟ್ಟಗಳ್ಳಿಯ 48 ನೇ ವಾಡ್೯ ಬಿಜೆಪಿ ಕಾರ್ಪೋರೇಟರ್ ಲಕ್ಷ್ಮಿ ಕಿರಣ್ ಸಹೋದರ ಕೊಲೆ ಆರೋಪಿ ಶಂಕರ್ ಎಂದು ಹೇಳಲಾಗುತ್ತಿದೆ.
ಹನುಮಜಯಂತಿ ಆಚರಣೆ ವೇಳೆ ನಾಯಕ ನಟ ದಿ.ಪುನೀತ್ ರಾಜ್ ಕುಮಾರ್ ಭಾವಚಿತ್ರ ಹಾಕುವ ವಿಚಾರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತರುಗಳ ನಡುವೆಯೇ ಗಲಾಟೆ ನಡೆದಿತ್ತು. ಈ ಸಂಬಂಧ ಸಂಧಾನ ಮಾಡಿಕೊಳ್ಳಲು ವೇಣುಗೋಪಾಲನನ್ನು ರವಿವಾರ ರಾತ್ರಿ ಅಗ್ನಿಶಾಮಕ ಕಚೇರಿ ಬಳಿಗೆ ಕರೆಸಿಕೊಂಡು ಕೊಲೆ ಮಾಡಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯ ವಿರುದ್ಧ ದೂರು ದಾಖಲಾಗಿದ್ದು, ಸೋಮವಾರ ಸಂದೇಶ್ ಮತ್ತು ಮಣಿಕಂಠ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು. ಇನ್ನುಳಿದ ನಾಲ್ವರು ಆರೋಪಿಗಳಾದ ಶಂಕರ ಅಲಿಯಾಸ್ ತುಪ್ಪ, ಅನಿಲ್, ಹ್ಯಾರಿಸ್ ಮತ್ತು ಮಂಜ ಎಂಬುವವರನ್ನು ಬಂಧಿಸಲಾಗಿದೆ ಎಂದು ಕೆಲವು ಮೂಲಗಳಿಂದ ತಿಳಿದು ಬಂದಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…