ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ:ಹಳೆಯಂಗಡಿಯ ಸಾರ್ವಜನಿಕ ಗ್ರಂಥಾಲಯ ದುರಸ್ತಿಗೆ ಸಾರ್ವಜನಿಕರ ಆಗ್ರಹ..!

ಮುಲ್ಕಿ: ಹಳೆಯಂಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕ ಗ್ರಂಥಾಲಯ ಮಳೆಗೆ ಸೋರುತ್ತಿದ್ದು ಅಪಾಯದ ಸ್ಥಿತಿಯಲ್ಲಿದೆ.

 

ಮಳೆಗೆ ಸೋರುವುದನ್ನು ತಪ್ಪಿಸಲು ಕಟ್ಟಡದ ಮೇಲ್ಭಾಗದಲ್ಲಿ ತಾತ್ಕಾಲಿಕವಾಗಿ ಟಾರ್ಪಾಲ್ ಅಳವಡಿಸಲಾಗಿದೆ.ಹಳೆಯಂಗಡಿ ಗ್ರಾಮ ಪಂಚಾಯತ್ ಪಕ್ಕದಲ್ಲೇ ಸಾರ್ವಜನಿಕ ಗ್ರಂಥಾಲಯವಿದ್ದರೂ ಇದುವರೆಗೂ ದುರಸ್ತಿಗೆ ಪಂಚಾಯತ್ ಆಡಳಿತ ಮುಂದಾಗಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಕಟ್ಟಡದ ಒಳಭಾಗದ ಮೇಲ್ಭಾಗದಲ್ಲಿ ಹಳೆಯ ಕಾಲದ ಮರಗಳಿಗೆ ಗೆದ್ದಲು ಹಿಡಿದಿದ್ದು ಮತ್ತಷ್ಟು ಅಪಾಯಕಾರಿಯಾಗಿ ಪರಿಣಮಿಸಿದೆ. ಕಳೆದ ಬಿಜೆಪಿ ಸರಕಾರದ ಅವಧಿಯಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಅವಧಿಯಲ್ಲಿ ನೂತನ ಗ್ರಂಥಾಲಯ ನಿರ್ಮಾಣಕ್ಕೆ ಅನುದಾನ ಕ್ರೋಡೀಕರಿಸಿದ್ದರೂ ಸರಕಾರದ ಬದಲಾವಣೆಯಿಂದ ಕಾಮಗಾರಿಗಳಿಗೆ ತಡೆ ಉಂಟಾಗಿದೆ.ಗ್ರಂಥಾಲಯದ ಹಿಂಬಾಗದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಶೌಚ ಮಾಡುತ್ತಿದ್ದು ಗ್ರಂಥಾಲಯಕ್ಕೆ ಪುಸ್ತಕ ಓದಲು ಬರುವವರಿಗೆ ದುರ್ವಾಸನೆಯುಕ್ತ ವಾತಾವರಣ ಹಾಗೂ ರೋಗದ ಭೀತಿ ಎದುರಾಗಿದೆ.

ಕೂಡಲೇ ಹಳೆಯಂಗಡಿ ಗ್ರಾಮ ಪಂಚಾಯತ್ ಆಡಳಿತ ಅಪಾಯಕಾರಿ ಗ್ರಂಥಾಲಯದ ಕಟ್ಟಡವನ್ನು ತಾತ್ಕಾಲಿಕ ನೆಲೆಯಲ್ಲಿ ದುರಸ್ತಿಪಡಿಸಲು ಮುಂದಾಗಬೇಕು ಎಂದು ಸ್ಥಳೀಯ ನಾಗರಿಕರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!