ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ:ಹಳೆಯಂಗಡಿಯ ಸಾರ್ವಜನಿಕ ಗ್ರಂಥಾಲಯ ದುರಸ್ತಿಗೆ ಸಾರ್ವಜನಿಕರ ಆಗ್ರಹ..!

ಮುಲ್ಕಿ: ಹಳೆಯಂಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕ ಗ್ರಂಥಾಲಯ ಮಳೆಗೆ ಸೋರುತ್ತಿದ್ದು ಅಪಾಯದ ಸ್ಥಿತಿಯಲ್ಲಿದೆ.

 

ಮಳೆಗೆ ಸೋರುವುದನ್ನು ತಪ್ಪಿಸಲು ಕಟ್ಟಡದ ಮೇಲ್ಭಾಗದಲ್ಲಿ ತಾತ್ಕಾಲಿಕವಾಗಿ ಟಾರ್ಪಾಲ್ ಅಳವಡಿಸಲಾಗಿದೆ.ಹಳೆಯಂಗಡಿ ಗ್ರಾಮ ಪಂಚಾಯತ್ ಪಕ್ಕದಲ್ಲೇ ಸಾರ್ವಜನಿಕ ಗ್ರಂಥಾಲಯವಿದ್ದರೂ ಇದುವರೆಗೂ ದುರಸ್ತಿಗೆ ಪಂಚಾಯತ್ ಆಡಳಿತ ಮುಂದಾಗಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಕಟ್ಟಡದ ಒಳಭಾಗದ ಮೇಲ್ಭಾಗದಲ್ಲಿ ಹಳೆಯ ಕಾಲದ ಮರಗಳಿಗೆ ಗೆದ್ದಲು ಹಿಡಿದಿದ್ದು ಮತ್ತಷ್ಟು ಅಪಾಯಕಾರಿಯಾಗಿ ಪರಿಣಮಿಸಿದೆ. ಕಳೆದ ಬಿಜೆಪಿ ಸರಕಾರದ ಅವಧಿಯಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಅವಧಿಯಲ್ಲಿ ನೂತನ ಗ್ರಂಥಾಲಯ ನಿರ್ಮಾಣಕ್ಕೆ ಅನುದಾನ ಕ್ರೋಡೀಕರಿಸಿದ್ದರೂ ಸರಕಾರದ ಬದಲಾವಣೆಯಿಂದ ಕಾಮಗಾರಿಗಳಿಗೆ ತಡೆ ಉಂಟಾಗಿದೆ.ಗ್ರಂಥಾಲಯದ ಹಿಂಬಾಗದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಶೌಚ ಮಾಡುತ್ತಿದ್ದು ಗ್ರಂಥಾಲಯಕ್ಕೆ ಪುಸ್ತಕ ಓದಲು ಬರುವವರಿಗೆ ದುರ್ವಾಸನೆಯುಕ್ತ ವಾತಾವರಣ ಹಾಗೂ ರೋಗದ ಭೀತಿ ಎದುರಾಗಿದೆ.

ಕೂಡಲೇ ಹಳೆಯಂಗಡಿ ಗ್ರಾಮ ಪಂಚಾಯತ್ ಆಡಳಿತ ಅಪಾಯಕಾರಿ ಗ್ರಂಥಾಲಯದ ಕಟ್ಟಡವನ್ನು ತಾತ್ಕಾಲಿಕ ನೆಲೆಯಲ್ಲಿ ದುರಸ್ತಿಪಡಿಸಲು ಮುಂದಾಗಬೇಕು ಎಂದು ಸ್ಥಳೀಯ ನಾಗರಿಕರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!