ಮುಲ್ಕಿ: ಹಳೆಯಂಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕ ಗ್ರಂಥಾಲಯ ಮಳೆಗೆ ಸೋರುತ್ತಿದ್ದು ಅಪಾಯದ ಸ್ಥಿತಿಯಲ್ಲಿದೆ.
ಮಳೆಗೆ ಸೋರುವುದನ್ನು ತಪ್ಪಿಸಲು ಕಟ್ಟಡದ ಮೇಲ್ಭಾಗದಲ್ಲಿ ತಾತ್ಕಾಲಿಕವಾಗಿ ಟಾರ್ಪಾಲ್ ಅಳವಡಿಸಲಾಗಿದೆ.ಹಳೆಯಂಗಡಿ ಗ್ರಾಮ ಪಂಚಾಯತ್ ಪಕ್ಕದಲ್ಲೇ ಸಾರ್ವಜನಿಕ ಗ್ರಂಥಾಲಯವಿದ್ದರೂ ಇದುವರೆಗೂ ದುರಸ್ತಿಗೆ ಪಂಚಾಯತ್ ಆಡಳಿತ ಮುಂದಾಗಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಕಟ್ಟಡದ ಒಳಭಾಗದ ಮೇಲ್ಭಾಗದಲ್ಲಿ ಹಳೆಯ ಕಾಲದ ಮರಗಳಿಗೆ ಗೆದ್ದಲು ಹಿಡಿದಿದ್ದು ಮತ್ತಷ್ಟು ಅಪಾಯಕಾರಿಯಾಗಿ ಪರಿಣಮಿಸಿದೆ. ಕಳೆದ ಬಿಜೆಪಿ ಸರಕಾರದ ಅವಧಿಯಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಅವಧಿಯಲ್ಲಿ ನೂತನ ಗ್ರಂಥಾಲಯ ನಿರ್ಮಾಣಕ್ಕೆ ಅನುದಾನ ಕ್ರೋಡೀಕರಿಸಿದ್ದರೂ ಸರಕಾರದ ಬದಲಾವಣೆಯಿಂದ ಕಾಮಗಾರಿಗಳಿಗೆ ತಡೆ ಉಂಟಾಗಿದೆ.ಗ್ರಂಥಾಲಯದ ಹಿಂಬಾಗದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಶೌಚ ಮಾಡುತ್ತಿದ್ದು ಗ್ರಂಥಾಲಯಕ್ಕೆ ಪುಸ್ತಕ ಓದಲು ಬರುವವರಿಗೆ ದುರ್ವಾಸನೆಯುಕ್ತ ವಾತಾವರಣ ಹಾಗೂ ರೋಗದ ಭೀತಿ ಎದುರಾಗಿದೆ.
ಕೂಡಲೇ ಹಳೆಯಂಗಡಿ ಗ್ರಾಮ ಪಂಚಾಯತ್ ಆಡಳಿತ ಅಪಾಯಕಾರಿ ಗ್ರಂಥಾಲಯದ ಕಟ್ಟಡವನ್ನು ತಾತ್ಕಾಲಿಕ ನೆಲೆಯಲ್ಲಿ ದುರಸ್ತಿಪಡಿಸಲು ಮುಂದಾಗಬೇಕು ಎಂದು ಸ್ಥಳೀಯ ನಾಗರಿಕರು ಆಗ್ರಹಿಸಿದ್ದಾರೆ.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…
ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…