ಮುಲ್ಕಿ: ಹಳೆಯಂಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕ ಗ್ರಂಥಾಲಯ ಮಳೆಗೆ ಸೋರುತ್ತಿದ್ದು ಅಪಾಯದ ಸ್ಥಿತಿಯಲ್ಲಿದೆ.
ಮಳೆಗೆ ಸೋರುವುದನ್ನು ತಪ್ಪಿಸಲು ಕಟ್ಟಡದ ಮೇಲ್ಭಾಗದಲ್ಲಿ ತಾತ್ಕಾಲಿಕವಾಗಿ ಟಾರ್ಪಾಲ್ ಅಳವಡಿಸಲಾಗಿದೆ.ಹಳೆಯಂಗಡಿ ಗ್ರಾಮ ಪಂಚಾಯತ್ ಪಕ್ಕದಲ್ಲೇ ಸಾರ್ವಜನಿಕ ಗ್ರಂಥಾಲಯವಿದ್ದರೂ ಇದುವರೆಗೂ ದುರಸ್ತಿಗೆ ಪಂಚಾಯತ್ ಆಡಳಿತ ಮುಂದಾಗಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಕಟ್ಟಡದ ಒಳಭಾಗದ ಮೇಲ್ಭಾಗದಲ್ಲಿ ಹಳೆಯ ಕಾಲದ ಮರಗಳಿಗೆ ಗೆದ್ದಲು ಹಿಡಿದಿದ್ದು ಮತ್ತಷ್ಟು ಅಪಾಯಕಾರಿಯಾಗಿ ಪರಿಣಮಿಸಿದೆ. ಕಳೆದ ಬಿಜೆಪಿ ಸರಕಾರದ ಅವಧಿಯಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಅವಧಿಯಲ್ಲಿ ನೂತನ ಗ್ರಂಥಾಲಯ ನಿರ್ಮಾಣಕ್ಕೆ ಅನುದಾನ ಕ್ರೋಡೀಕರಿಸಿದ್ದರೂ ಸರಕಾರದ ಬದಲಾವಣೆಯಿಂದ ಕಾಮಗಾರಿಗಳಿಗೆ ತಡೆ ಉಂಟಾಗಿದೆ.ಗ್ರಂಥಾಲಯದ ಹಿಂಬಾಗದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಶೌಚ ಮಾಡುತ್ತಿದ್ದು ಗ್ರಂಥಾಲಯಕ್ಕೆ ಪುಸ್ತಕ ಓದಲು ಬರುವವರಿಗೆ ದುರ್ವಾಸನೆಯುಕ್ತ ವಾತಾವರಣ ಹಾಗೂ ರೋಗದ ಭೀತಿ ಎದುರಾಗಿದೆ.
ಕೂಡಲೇ ಹಳೆಯಂಗಡಿ ಗ್ರಾಮ ಪಂಚಾಯತ್ ಆಡಳಿತ ಅಪಾಯಕಾರಿ ಗ್ರಂಥಾಲಯದ ಕಟ್ಟಡವನ್ನು ತಾತ್ಕಾಲಿಕ ನೆಲೆಯಲ್ಲಿ ದುರಸ್ತಿಪಡಿಸಲು ಮುಂದಾಗಬೇಕು ಎಂದು ಸ್ಥಳೀಯ ನಾಗರಿಕರು ಆಗ್ರಹಿಸಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…