ಮಂಗಳೂರು: ಶೆಫ್ ಟಾಕ್ ಮಂಗಳೂರು ಕಬ್ಬಡಿ ಪ್ರೀಮಿಯರ್ ಲೀಗ್ ಸೀಸನ್-2 ಆಗಸ್ಟ್ 30ರಿಂದ ಸೆಪ್ಟೆಂಬರ್ 1ರವರೆಗೆ ನಡೆಯಲಿದ್ದು ಆಗಸ್ಟ್ 30ರಂದು ಆಹಾರೋತ್ಸವದ ಉದ್ಘಾಟನೆ ನಡೆಯಲಿದೆ. ಕಾರ್ಯಕ್ರಮ ಆಯೋಜಕ ಸುದೇಶ್ ಭಂಡಾರಿ ತಿಳಿಸಿದರು.
ಮಂಗಳೂರಿನ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು ಆಗಸ್ಟ್ 30ರ ಆಹಾರೋತ್ಸವದ ಉದ್ಘಾಟನೆ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಸುಧೀರ್ ಶೆಟ್ಟಿ ಉದ್ಘಾಟಿಸಲಿದ್ದು; ಆಗಸ್ಟ್ 31ರಂದು ಕಬಡ್ಡಿ ಪಂದ್ಯಾಟದ ಉದ್ಘಾಟನೆ ನಡೆಯಲಿದ್ದು ಇದನ್ನು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಉದ್ಘಾಟಿಸಲಿದ್ದಾರೆ. ಕಳೆದ ವರ್ಷ ನಡೆದ ಸೀಸನ್ 1 ಅತ್ಯಂತ ಯಶಸ್ವಿಯಾಗಿ ನಡೆದಿದ್ದು ಈ ವರ್ಷ ಗೌರವಾಧ್ಯಕ್ಷ ಪ್ರಕಾಶ್ ಕುಂಪಲ, ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದೇವೆ. ಕಬಡ್ಡಿ ಟೂರ್ನಮೆಂಟ್ ಜೊತೆಗೆ ಈ ಬಾರಿ ಆಹಾರೋತ್ಸವ ಮತ್ತು ವಿನೋದ ಮೇಳವನ್ನು ಕೂಡಾ ಆಯೋಜಿಸಿದ್ದೇವೆ. ಜೊತೆಗೆ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಡಾ. ಸದಾನಂದ ಶೆಟ್ಟಿ, ಕನ್ಯಾನ ಸದಾಶಿವ ಶೆಟ್ಟಿ ಹಾಗೂ ಸದಾಶಿವ ಉಳ್ಳಾಲ ಪಾಲ್ಗೊಳ್ಳಲಿದ್ದಾರೆ. ಬಹುಮಾನ ವಿತರಣೆಯನ್ನು “ಶೆಫ್ ಟಾಕ್ ಫುಡ್ & ಹಾಸ್ಪಿಟಾಲಿಟಿ ಸರ್ವಿಸಸ್”ನ ಮ್ಯಾನೇಜಿಂಗ್ ಡೈರೆಕ್ಟರ್ ಗೋವಿಂದ ಬಿ. ಪೂಜಾರಿ ಅವರು ನೆರವೇರಿಸಲಿದ್ದಾರೆ“ ಎಂದವರು ಹೇಳಿದರು.
ಈ ವೇಳೆ ವಿ ಆರ್ ಯುನೈಟೆಡ್ ಅಧ್ಯಕ್ಷ ಅಝ್ಫರ್ ರಜಾಕ್ ಮಾತನಾಡಿ ಟೂರ್ನಮೆಂಟ್ನಲ್ಲಿ 8 ತಂಡಗಳು ಭಾಗವಹಿಸುತ್ತಿವೆ. ಅಸ್ರಾ ಬ್ರಿಗೇಡ್ಸ್, ಲೈಫ್ ಲೈನ್ಸ್ ಫಾಲ್ಕನ್ಸ್, ಟೀಮ್ ಬಾವ, ಯು ಕುಂಜತ್ತೂರು, ಮಂಗಳೂರು ಯುನೈಟೆಡ್ ಕಬಡ್ಡಿ ಕ್ಲಬ್, ಪ್ರಕಾಶ್ ಕುಂಪಲ ವಾರಿಯರ್ಸ್, ಕರ್ನಾಟಕ ತುಳುವಾಸ್ ನೈಜೀರಿಯಾ, ಮತ್ತು ನ್ಯೂ ಸ್ಟಾರ್ ಮಂಗಳೂರು ಈ ತಂಡಗಳ ಆಟಗಾರರನ್ನು ಆಗಸ್ಟ್ 20ರಂದು ಖಾಸಗಿ ಹೋಟೆಲ್ನಲ್ಲಿ ನಡೆದ ಹರಾಜು ಮೂಲಕ ಆಯ್ಕೆ ಮಾಡಲಾಗಿತ್ತು, ಒಟ್ಟು 99 ಆಟಗಾರರು ಆಯ್ಕೆಯಾಗಿದ್ದಾರೆ. ಈ ವರ್ಷ ನಾವು 100+ ಆಹಾರ ಮಳಿಗೆಗಳನ್ನು ನಿರೀಕ್ಷಿಸುತ್ತಿದ್ದೇವೆ. ಅವು ವಿವಿಧ ರೀತಿಯ ರುಚಿಕರ ಆಹಾರಗಳನ್ನು ಒದಗಿಸುತ್ತವೆ ಎಂದವರು ಹೇಳಿದರು.
ಕಾರ್ಯಕ್ರಮದಲ್ಲಿ ಗೌರವ ಸಲಹೆಗಾರ ವಿಶ್ವಾಸ್ ದಾಸ್, ಮಾಜಿ ಶಾಸಕರು ಬಿಎ ಮೊಯಿದೀನ್ ಬಾವಾ, ಹರೀಶ್ ನಾಯಕ್, ಕರುಣಾಕರ್, ಹಮೀದ್ ಅಮ್ಮಿ, ದೀಪಕ್ ಪಿಲಾರ್, ವಿನೋದ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…