ಜನ ಮನದ ನಾಡಿ ಮಿಡಿತ

Advertisement

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ:2022 ಮತ್ತು 2023ನೇ ಸಾಲಿನ ಗೌರವ ಪ್ರಶಸ್ತಿ ಘೋಷಣೆ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಕೊಡಮಾಡುವ 2022 ಮತ್ತು 2023ನೇ ಸಾಲಿನ ‘ಗೌರವ ಪ್ರಶಸ್ತಿ’ಗೆ ಆರು ಮಂದಿ ಸಾಧಕರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಪೂರ್ಣಗೊಂಡಿದೆ. 2022ನೇ ಸಾಲಿನಲ್ಲಿ ಹಂಝತುಲ್ಲಾಹ್‌ ಕುವೇಂಡ ಬೆಂಗಳೂರು (ಬ್ಯಾರಿ ಭಾಷೆ ಮತ್ತು ಸಂಘಟನೆ), ಮರಿಯಮ್‌ ಇಸ್ಮಾಈಲ್‌ ಉಳ್ಳಾಲ (ಬ್ಯಾರಿ ಸಾಹಿತ್ಯ) ಮತ್ತು ಎಂ.ಜಿ. ಶಾಹುಲ್‌ ಹಮೀದ್‌ ಗುರುಪುರ (ಬ್ಯಾರಿ ಸಂಸ್ಕೃತಿ ಮತ್ತು ಕಲೆ) ಹಾಗೂ 2023ನೇ ಸಾಲಿನಲ್ಲಿ ಟಿ.ಎ. ಆಲಿಯಬ್ಬ ಜೋಕಟ್ಟೆ (ಬ್ಯಾರಿ ಭಾಷೆ ಮತ್ತು ಸಂಘಟನೆ), ಅಶ್ರಫ್‌ ಅಪೋಲೊ ಕಲ್ಲಡ್ಕ (ಬ್ಯಾರಿ ಸಂಸ್ಕೃತಿ ಮತ್ತು ಕಲೆ) ಮತ್ತು ಮುಹಮ್ಮದ್‌ ಶರೀಫ್‌ ನಿರ್ಮುಂಜೆ (ಬ್ಯಾರಿ ಸಾಹಿತ್ಯ) ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

 

ಅಕಾಡೆಮಿಯ ಮಾಜಿ ಅಧ್ಯಕ್ಷ ಮುಹಮ್ಮದ್‌ ಕರಂಬಾರು, ಮಾಜಿ ಸದಸ್ಯರಾದ ಅತ್ತೂರು ಚೆಯ್ಯಬ್ಬ, ಆಯಿಶಾ ಯು.ಕೆ. ಮತ್ತು ಹುಸೈನ್‌ ಕಾಟಿಪಳ್ಳ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿದ್ದು ಸಹಕರಿಸಿದ್ದಾರೆ. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಸ್ಥಾಯಿ ಸಮಿತಿ ಸಭೆ ಹಾಗೂ ಸರ್ವ ಸದಸ್ಯರ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸಲಾಗಿದೆ.

ಪ್ರಶಸ್ತಿಯು ಐವತ್ತು ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕಗಳನ್ನೊಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಸಮಾರಂಭವು ಸೆ. 6ರಂದು ಸಂಜೆ 4.30ಕ್ಕೆ ಮಂಗಳೂರು ಪುರಭವನದಲ್ಲಿ ನಡೆಯಲಿದೆ ಎಂದು ಅಕಾಡೆಮಿಯ ಅಧ್ಯಕ್ಷ ಉಮರ್‌ ಯು. ಹೆಚ್. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

error: Content is protected !!