ಅಳಿವಿನಂಚಿನ ಅಳಿಲುಗಳನ್ನು ಬೇಟೆಯಾಡಿ ಭಕ್ಷ್ಯ ತಯಾರಿ ನಡೆಸುತ್ತಿದ್ದ ವೇಳೆ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದು, ಆರೋಪಿಗಳು ಎಸ್ಕೇಪ್ ಆಗಿದ್ದಾರೆ.
ಸುಳ್ಯ: ಸಂಪಾಚೆ ವಲಯದ ದಬ್ಬಡ್ಕ ಗಟ್ಟಿ ಘಾಟ್ ಮೀಸಲು ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶಿಸಿ ವಿನಾಶದಂಚಿನಲ್ಲಿರುವ ಮಲಬಾರ್ ದೈತ್ಯ ಅಳಿಲು ಹಾಗೂ ಹಾರುವ ಅಳಿಲುಗಳನ್ನು ಬೇಟೆಯಾಡಿ ಭಕ್ಷ್ಯ ತಯಾರಿಸುತ್ತಿದ್ದ ವೇಳೆ ಅರಣ್ಯ ಅಧಿಕಾರಿಗಳು ದಾಳಿ ನಡೆಸಿ ಬೇಯಿಸಿದ ಮಾಂಸವನ್ನು ವಶಕ್ಕೆ ಪಡೆದುಕೊಂಡ ಘಟನೆ ಸುಳ್ಯ ಗಡಿ ಭಾಗದಿಂದ ವರದಿಯಾಗಿದೆ ಕೊಡಗು ಸಂಪಾಚೆ ವಲಯದ ದಬ್ಬಡ್ಕದ ಗಟ್ಟಿ ಘಾಟ್ ಮೀಸಲು ಅರಣ್ಯದಲ್ಲಿ ಕಾಡು ಪ್ರಾಣಿಗಳನ್ನು ಬೇಟಿ ಆಡಿರುವ ಬಗ್ಗೆ ಸಂಪಾಜೆ ವಲಯ ಅರಣ್ಯ ಇಲಾಖೆಗೆ ಖಚಿತ ಮಾಹಿತಿ ಲಭಿಸಿತು. ಈ ಹಿನ್ನೆಲೆಯಲ್ಲಿ ಮೂವರು ಆರೋಪಿಗಳ ಮನೆಗಳಿಗೆ ದಾಳಿ ಮಾಡಿ ಮಾಂಸ ಮತ್ತು ಕೋವಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ ಈ ಸಂದರ್ಭ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ ಆರೋಪಿಗಳನ್ನು ದಬ್ಬಡ್ಕ ಗ್ರಾಮದ ಮದನ್ ಕುಮಾರ್ (38) ಗಣಪತಿ ಬಿನ್ ಮಾಚಯ್ಯ (50) ಹಾಗೂ ಪ್ರಸನ್ನಕುಮಾರ್ (35) ಎಂಬುದಾಗಿ ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಯಡಿಯಲ್ಲಿ ಪ್ರಕಟಣೆ ದಾಖಲಿಸಿ ಕೊಂಡು ತನಿಖೆ ನಡೆಸಲಾಗುತ್ತಿದೆ ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಯೈಟಿ ಪೂವಯ್ಯ ಮತ್ತು ವಲಯ ಅರನ್ಯಾಧಿಕಾರಿ ಮಧುಸೂಧನ ಮಾರ್ಗದರ್ಶನದಲ್ಲಿ ಉಪವಲಯ ಅರಣ್ಯಾಧಿಕಾರಿ ನಿಸರ್ ಅಹಮದ್ ಗಸ್ತು ಅರಣ್ಯ ಪಾಲಕರಾದ ಚಂದ್ರಪ್ಪ ಕಾರ್ತಿಕ್ ಮನೋಜ್ ಕುಮಾರ್ ದುರ್ಗಾ ಪ್ರಸಾದ್ ಗಗನ್ ಶರತ್ ಶಂಕರ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…